ಶ್ರೀ ಭಗವದ್ಗೀತಾ ಸ್ಪರ್ಧೆ: ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Upayuktha
0 minute read
0

ಉಜಿರೆಯ ಎಸ್‌ಡಿಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ




ಉಜಿರೆ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ 'ಭಗವದ್ಗೀತೆಯಲ್ಲಿ ಭ್ರಾತೃತ್ವ' ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಬಹುಮಾನ ಪಡೆದಿದ್ದಾಳೆ. ದ.ಕ ಜಿಲ್ಲಾ ಮಟ್ಟದಲ್ಲಿ ಈ ಮೊದಲು ಪ್ರಥಮ ಬಹುಮಾನ ಪಡೆದಿದ್ದಳು. 


ಈಕೆ ಉಜಿರೆಯ ಪತ್ರಿಕೆ ವಿತರಕರಾದ ಕಲ್ಮಂಜ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ದ್ವಿತೀಯ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top