ಉಡುಪಿ: ಉಡುಪಿಯ ಕೇಂದ್ರೀಯ ವಿದ್ಯಾಲಯದ ವಾರ್ಷಿಕ ದಿನಾಚರಣೆಯು ಡಿಸೆಂಬರ್ 23 ರಂದು ನಡೆಯಿತು. ಪ್ರಾಂಶುಪಾಲರಾದ ಕರೀಂಖಾನ್ ಕಾರ್ಯಕ್ರಮ ಉದ್ಘಾಟಿಸಿ, ವಾರ್ಷಿಕ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಕೆನರಾ ಬ್ಯಾಂಕ್ ನ ಎಜಿಎಂ ಸಂಜೀವ್ ಕುಮಾರ್, ಮಣಿಪಾಲ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್, ವಿಎಂಸಿ ಸದಸ್ಯೆ ಅಂಬಿಕಾ ರಣಾಬ್ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯ, ಸಂಗೀತ, ಜಾನಪದ ಸಂಪ್ರದಾಯಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮವು ಪ್ರಮುಖ ಆಕರ್ಷಣೆಯಾಗಿತ್ತು.
ಸಾಂಸ್ಕೃತಿಕ ಕಾರ್ಯಕ್ರಮದ ನಂತರ, ವರ್ಷವಿಡೀ ನಡೆದ ವಿವಿಧ ಸಿಸಿಎ (ಸಹ ಪಠ್ಯಕ್ರಮ ಚಟುವಟಿಕೆಗಳು) ಸ್ಪರ್ಧೆಗಳ ವಿಜೇತರನ್ನು ಘೋಷಿಸಲಾಯಿತು ಮತ್ತು 100% ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಮತ್ತು ಶಾಲಾ ಕಾರ್ಯಕ್ರಮಗಳನ್ನು ಸಕ್ರಿಯವಾಗಿ ಬೆಂಬಲಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ಇಂಗ್ಲಿಷ್ ಶಿಕ್ಷಕ ವಸಂತ ಪದ್ಮಶಾಲಿ ಸ್ವಾಗತಿಸಿದರು, ಶಿಕ್ಷಕ ರಾಗೇಶ್ ವಂದಿಸಿದರು
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ