ಜ.4ರಂದು ಸುಲ್ಕೇರಿ ನೂತನ ಸಭಾಭವನ ಉದ್ಘಾಟನೆ

Upayuktha
0


ಉಜಿರೆ: ಸುಲ್ಕೇರಿ ಗ್ರಾಮದಲ್ಲಿರುವ ಭಗವಾನ್ ನೇಮಿನಾಥ ಸ್ವಾಮಿ ಬಸದಿ ಬಳಿ ನಿರ್ಮಿಸಲಾದ ನೂತನ ಶ್ರೀ ನೇಮಿನಾಥ ಸಭಾಭವನವನ್ನು 2025ರ ಜನವರಿ 4 ರಂದು ಶನಿವಾರ ಸಂಜೆ ನಾಲ್ಕು ಗಂಟೆಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸುವರು.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾಕರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸುವರು.


ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ತುಮಕೂರಿನ ಉದ್ಯಮಿ ಜಿ. ಎಸ್. ರಾಜೇಂದ್ರ ಕುಮಾರ್ ಮತ್ತು ಅಳದಂಗಡಿ ಅರಮನೆ ಶಿವಪ್ರಸಾದ ಅಜಿಲರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಸದಿಯ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top