ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ

Upayuktha
0


ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಶ್ರೀವಾಣಿ ವಿದ್ಯಾಕೇಂದ್ರದ 9ನೇ ತರಗತಿಯ ವಿದ್ಯಾರ್ಥಿನಿ, ಎನ್ ಸಿ ಸಿ ಕೆಡೆಟ್ ಸಾರ್ಜೆಂಟ್ ಅನ್ವಿತಾ ಸಾವಿತ್ರಿ ಭಟ್ ಇವಳು ದೆಹಲಿಯಲ್ಲಿ  ನಡೆಯುವ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಕಳೆದ ಸಪ್ಟೆಂಬರಿನಿಂದ ನಾಲ್ಕು ತಿಂಗಳುಗಳ ಕಾಲ ನಡೆದ 7 ಹಂತದ ಕಠಿಣ ಆಯ್ಕೆ ಶಿಬಿರಗಳಲ್ಲಿ ಸಾಂಸ್ಕೃತಿಕ  (ಮ್ಯಾಂಡೋಲಿನ್ ವಾದನ ಮತ್ತು ಗಾಯನ) ವಿಭಾಗದಲ್ಲಿ ಆಯ್ಕೆಗೊಂಡು, ಪ್ರಸ್ತುತ  ಡಿಸೆಂಬರ್ 28ರಿಂದ ಜನವರಿ 31ರವರೆಗೆ ನಡೆಯುತ್ತಿರುವ ದೆಹಲಿ ಶಿಬಿರದಲ್ಲಿ  ಭಾಗವಹಿಸುತ್ತಿದ್ದಾಳೆ. ಈಗಾಗಲೇ ಮಾನ್ಯ ಉಪರಾಷ್ಟ್ರಪತಿಗಳ ಭೇಟಿ, ಮಾನ್ಯ ರಕ್ಷಣಾ ಮಂತ್ರಿಗಳ ಭೇಟಿ, ಭೂಸೇನಾ ಮುಖ್ಯಸ್ಥರ ಭೇಟಿ ಹಾಗೂ ವಾಯುಸೇನಾ ಮುಖ್ಯಸ್ಥರ ಭೇಟಿಯಲ್ಲಿ ಪಾಲ್ಗೊಂಡಿರುತ್ತಾಳೆ.  


ಅಲ್ಲದೆ ದೆಹಲಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡು ಜನವರಿ 27ರಂದು ನಡೆಯುವ  ಪ್ರಧಾನ ಮಂತ್ರಿಗಳ ರ್‍ಯಾಲಿಯ  ಪಥಸಂಚಲನದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ. 


ಈ ಪ್ರತಿಭಾವಂತೆ ಮಲ್ಲೇಶ್ವರ  ಸಮೀಪದ ಮಾರುತಿ ಬಡಾವಣೆ ನಿವಾಸಿಗಳಾದ  ಮುರಳಿ ಕುಕ್ಕುಪುಣಿ ಹಾಗೂ ಡಾ. ಚೈತ್ರಲಕ್ಷ್ಮಿ ಕಮ್ಮಜೆ ಇವರ ಸುಪುತ್ರಿ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top