ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ
ಬೆಳ್ತಂಗಡಿ: ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಅ.ಭಾ ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಗಣಪತಿ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯವು ನಡೆಯಿತು. ಅಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿ ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದರು.
ಕಾರ್ಯಕ್ರಮಕ್ಕೆ ಹವ್ಯಕ ಭವನದ ಕ್ರಿಯಾ ಸಮಿತಿಯ ಕಾರ್ಯದರ್ಶಿ ವೆಂಕಪ್ಪಯ್ಯ ಇವರು ದೀಪ ಪ್ರಜ್ವಲಿಸಿ, ಶಾರದಾ ಮಾತೆ ಮತ್ತು ಭಾರತಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಗೈಯುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು.
ಅತಿಥಿಗಳಾದ ವೆಂಕಪ್ಪಯ್ಯ ಇವರನ್ನು ಪ್ರೊ. ಗಣಪತಿ ಭಟ್ ಕುಳಮರ್ವ ಇವರು ಮತ್ತು ಸಂಪನ್ಮೂಲ ವ್ಯಕ್ತಿ ಡಾ. ಶ್ರೀಧರ್ ಭಟ್ ಇವರನ್ನು ಸುಭಾಷಿಣಿ ಇವರು ತಾಂಬೂಲ ನೀಡಿ ಗೌರವಿಸಿದರು.
ಸಮಿತಿಯ ಸದಸ್ಯೆ ಸಂತೋಷಿನಿ ಇವರು ಶಾರದೆಯನ್ನು ಸ್ತುತಿಸಿದರು. ಕಾರ್ಯದರ್ಶಿ ಸುಭಾಷಿಣಿ ಯವರ ರಚನೆಯ ಆಶಯ ಗೀತೆಯನ್ನು ಅಶ್ವಿಜ ಶ್ರೀಧರ್ ಇವರು ರಾಗ ಸಂಯೋಜಿಸಿ ಸುಶ್ರಾವ್ಯವಾಗಿ ಹಾಡಿದರು.
ಡಾ. ಶ್ರೀಧರ ಭಟ್ ಇವರು ಗೀತೆಯ ಸ್ವರೂಪ, ಸಾರ, ಅದು ಸಾಹಿತ್ಯಕ್ಕೆ ಹೇಗೆ ಆಧಾರಶಿಲೆಯಾಗಿದೆ ಎನ್ನುವುದರ ಬಗ್ಗೆ ಮಾತನಾಡಿದರು. ಜೀವನ ಪದ್ಧತಿಯನ್ನು ತಿಳಿಸುವ ಗೀತೆಯ ಸಾರದಂತೆ ಜೀವನದ ಯಾವುದೇ ಕ್ಲಿಷ್ಟಕರ ಸನ್ನಿವೇಶದಲ್ಲಿ ಪಲಾಯನ ಮಾಡದೆ, ಯಾವುದೇ ಬಂಧಗಳಿಗೆ ಅಂಟಿಕೊಳ್ಳದೆ ಧೈರ್ಯದಿಂದ ಎದುರಿಸಬೇಕು ಎಂದು ಉದಾಹರಣೆಗಳೊಂದಿಗೆ ಬಹಳ ಮನೋಜ್ಞವಾಗಿ ತಿಳಿಸಿದರು.
ಕಾರ್ಯಕ್ರಮದ ಅತಿಥಿಗಳಾದ ವೆಂಕಪ್ಪಯ್ಯ ಇವರಿಗೆ ಹಿರಿಯರಾದ ಗೋಪಾಲಕೃಷ್ಣರಾವ್ ಅಡೂರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ. ಶ್ರೀಧರ್ ಭಟ್ ಇವರಿಗೆ ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಇಂದುಮತಿ ಇವರು ಪುಸ್ತಕ ಸ್ಮರಣಿಕೆ ನೀಡಿ ಗೌರವಿಸಿದರು. ಮಕ್ಕಳ ಪ್ರಕಾರದ ಪ್ರಮುಖ್ ಮೇಧ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಸುಭಾಷಿಣಿ ಸರ್ವರಿಗೂ ಧನ್ಯವಾದವನ್ನಿತ್ತರು.
ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಪ್ರಕಾರ ಪ್ರಮುಖರು ಮತ್ತು ಸದಸ್ಯರು, ನಮ್ಮ ಮನೆ ಹವ್ಯಕ ಭವನ ಕ್ರಿಯಾ ಸಮಿತಿಯ ಸದಸ್ಯರು, ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸದಸ್ಯರು, ಸ್ಥಳೀಯ ಭಜನಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವೇದವ್ಯಾಸ ಶಿಶುಮಂದಿರದ ಪದಾಧಿಕಾರಿಗಳು, ಹಾಗೂ ಊರಿನ ಮಹನೀಯರು ಮತ್ತು ಮಹಿಳೆಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪ್ರಥಮ ಅಧ್ಯಾಯದ ಪ್ರಯೋಜನವನ್ನು ಪಡೆದುಕೊಂಡರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ