ಮಂದಿರಗಳಲ್ಲಿ ಸರಕಾರದ ಹಸ್ತಕ್ಷೇಪ ಹಿಂಪಡೆದರೆ ಮಾತ್ರ ಸಂಸ್ಕೃತಿ ರಕ್ಷಣೆ ಸಾಧ್ಯ

Upayuktha
0

ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ ಮಾರ್ಗದರ್ಶನ 




ದೇವಸ್ಥಾನಗಳ ಮೂಲಕ ಧರ್ಮಪ್ರಚಾರ ಮಾಡಲು ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದಲ್ಲಿ 800ಕ್ಕೂ ಹೆಚ್ಚು ವಿಶ್ವಸ್ಥರ ನಿರ್ಧಾರ 


ಬೆಂಗಳೂರು : ಸಾಮಾಜಿಕ, ನ್ಯಾಯ , ಕುಟುಂಬ, ಶಿಕ್ಷಣ ವ್ಯವಸ್ಥೆಯನ್ನು ಒಂದೊಂದಾಗಿ ನಾವೇ ಸರ್ಕಾರಕ್ಕೆ ಒಪ್ಪಿಸಿದ್ದೇವೆ. ಸಮಾಜ ಸರಕಾರದ ಅಧೀನವಾಗುವುದು ದೈನ್ಯ ಪರಿಸ್ಥಿತಿಯಾಗಿದೆ. ಪ್ರತಿಯೊಂದು ವ್ಯವಸ್ಥೆಯಲ್ಲಿ ಸಮಾಜದ ಜನರು ಧರ್ಮದ ಆಧಾರವನ್ನು ಇಟ್ಟುಕೊಂಡು ಜೀವನ ನಡೆಸಿದರೆ ನಮ್ಮ ಸರ್ವಾಂಗೀಣ ಉನ್ನತಿಯಾಗುತ್ತದೆ.


ಸರಕಾರದ ಹಸ್ತಕ್ಷೇಪದಿಂದ ದೇವಸ್ಥಾನಗಳನ್ನು ಹಿಂಪಡೆದರೆ ಮಾತ್ರ ಪುನಃ ಸಮಾಜದ ಅಭಿವೃದ್ಧಿಯನ್ನು ಮಾಡಲು ಸಾಧ್ಯವಾಗಬಹುದು ಎಂದು ಉಪಸ್ಥಿತರಿಗೆ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ ಮಾರ್ಗದರ್ಶನ ಮಾಡಿದರು.


ದೇವಸ್ಥಾನಗಳ ಸಂಸ್ಕೃತಿಯ ರಕ್ಷಣೆಗಾಗಿ ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಆಯೋಜಿತ ‘ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನ' ವು ಗಂಗಮ್ಮ ತಿಮ್ಮಯ್ಯ ಕನ್ವೆಂಷನ್ ಹಾಲ್‌, ಬಸವೇಶ್ವರ ನಗರ, ಬೆಂಗಳೂರಿನಲ್ಲಿ ಎರಡನೆಯ ದಿನವು  ಯಶಸ್ವಿಯಾಗಿ ನಡೆಯುತ್ತಿದೆ.


ಈ ಸಮಯದಲ್ಲಿ ಸನಾತನ ಪಂಚಾಂಗ ಆ್ಯಂಡ್ರಾಯ್ಡ್ ಆ್ಯಪ್ 2025 ಇದರ ಲೋಕಾರ್ಪಣೆ ಮಾಡಲಾಯಿತು. (ಸನಾತನ ಪಂಚಾಂಗ ಆ್ಯಪ್ ನಲ್ಲಿ ಆಯಾದಿನದ ಮಾಹಿತಿ, ಪಂಚಾಂಗ, ಮುಹೂರ್ತ ಮಾತ್ರವಲ್ಲದೇ ಹಬ್ಬ- ಉತ್ಸವಗಳು, ಆಧ್ಯಾತ್ಮ, ಆಯುರ್ವೇದ ಮತ್ತು ಧರ್ಮಶಿಕ್ಷಣಕ್ಕೆ ಸಂಬಂಧಿಸಿದ ಲೇಖನಗಳು ಲಭ್ಯವಿರುವುದು ) . ನಂತರ ಸನಾತನದ ಗ್ರಂಥವಾದ 'ಆಯುರ್ವೇದವನ್ನು ಪಾಲಿಸಿ ಔಷಧಿಗಳಿಲ್ಲದೇ ಆರೋಗ್ಯವಂತರಾಗಿ' ಇದರ ಈ-ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.


ಧರ್ಮ ಪಾಲನೆಯಿಂದಲೇ ವಿಶ್ವದ ಶಾಂತಿ ಸಾಧ್ಯ:  ಪೂಜ್ಯ ಸಿದ್ಧಲಿಂಗ ಸ್ವಾಮಿಜಿ

ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ದೇವಸ್ಥಾನ ಮಾಡಬಲ್ಲದು. ವೇದ ಪಾರಾಯಣ , ಸಾಮೂಹಿಕ ಪೂಜೆ, ಯಜ್ಞ ಇತ್ಯಾದೆಗಳ ಮೂಲಕ ದೇವಸ್ಥಾನ ಮತ್ತು ಮಠಗಳಲ್ಲಿ ಜಾಗೃತಿ ಮೂಡಿಸಬೇಕು. ಧರ್ಮದಿಂದಲೇ ವಿಶ್ವದಶಾಂತಿ, ಮಾನವ ಧರ್ಮದ ಮೌಲ್ಯವನ್ನು  ಎತ್ತಿಹಿಡಿದಾಗ ವಿಶ್ವಕಲ್ಯಾಣ ಸಾಧ್ಯ. ವಿಶ್ವವೇ ನಮ್ಮ ಮನೆ, ಲೋಕಾ ಸಮಸ್ತಾ ಸುಖಿನೋ ಭವಂತು | ಎಂಬ ಧ್ಯೇಯವನ್ನಿಟ್ಟು ಧರ್ಮದ ರಕ್ಷಣೆ ಮಾಡಲು ಸ್ಕಂದೇಶ್ವರ ಸ್ವಾಮಿ ದೇವಸ್ಥಾನದ ಪೂಜ್ಯ ಸಿಧ್ಧಲಿಂಗ ಸ್ವಾಮಿಜಿ ಮಾರ್ಗದರ್ಶನ ಮಾಡಿದರು.


ಹಿಂದೂ ಸಂಸ್ಕೃತಿಯ ಉಳಿವಿಗಾಗಿ ಜಾಗೃತಿ ಅಗತ್ಯ: ವೇದಬ್ರಹ್ಮ ಶ್ರೀ ಇಂದ್ರಾಚಾರ್ಯ

ಹಿಂದೂ ಧರ್ಮ , ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ಮತ್ತು ಹಿಂದೂ ಧರ್ಮ ಜಾಗೃತಿ  ಕಾರ್ಯ ಪ್ರತಿಯೊಂದು ದೇವಸ್ಥಾನದಲ್ಲಿ ಆಗಬೇಕೆಂಬುದರ ಮಹತ್ವವನ್ನು ವೇದಬ್ರಹ್ಮ ಶ್ರೀ ಇಂದ್ರಾಚಾರ್ಯ ಇವರು  ಉಪಸ್ಥಿತರಿಗೆ ತಿಳಿಸಿದರು.


ಪಾಕಿಸ್ತಾನದಲ್ಲಿ ಸನಾತನ ಬೋರ್ಡ್ ಇಲ್ಲ, ಬಾಂಗ್ಲಾದೇಶದಲ್ಲಿ ಸನಾತನ ಬೋರ್ಡ್ ಇಲ್ಲ, ಹಾಗಿದ್ದರೆ ಭಾರತದಲ್ಲಿ ವಕ್ಫ್ ಬೋರ್ಡ್ ಯಾಕೆ ?: ಸುನಿಲ್ ಘನವಟ್

ಇಂದು ದೇವಸ್ಥಾನಗಳ ಪವಿತ್ರ ಭೂಮಿ ಒಂದು ರಾಕ್ಷಸಿ ಕಾನೂನಿನ ಮೂಲಕ ವಕ್ಫ್ ಬೋರ್ಡ್‌ನ ವಶವಾಗುತ್ತಿದೆ. ವಕ್ಫ್ ಬೋರ್ಡ್‌ನ ಮೂಲಕ ಯಾರ ಭೂಮಿಯೇ ಇರಲಿ, ಅದಕ್ಕೆ ಒಂದು ನೋಟಿಸ್ ಕೊಟ್ಟು ಭೂಮಿಯನ್ನು ವಕ್ಫ್ ವಶಪಡಿಸಿಕೊಳ್ಳಬಹುದು.


ಕೇವಲ ನಾಗರಿಕರದ್ದಲ್ಲ, ಕರ್ನಾಟಕ ರಾಜ್ಯದ ಸುಮಾರು 25000 ಎಕ್ರೆ ಭೂಮಿಯ ಮೇಲೆ ವಕ್ಫ್ ದಾವೆ ಹೂಡಿದೆ. ಭಾರತದಲ್ಲಿ ಇಂತಹ ಅನೇಕ ಕ್ಷೇತ್ರಗಳನ್ನು ವಕ್ಫ್ ಬೋರ್ಡ್ ಅನಧಿಕೃತವಾಗಿ ವಶಪಡಿಕೊಂಡಿದೆ. ಭಾರತದಲ್ಲಿ 9 ಲಕ್ಷ 5೦ ಸಾವಿರ ಎಕರೆ ಜಾಮೀನು ವಕ್ಫ್ ಬೋರ್ಡ್ ದ್ದಾಗಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಕಾಗದಪತ್ರಗಳನ್ನು, ದಾಖಲೆಗಳನ್ನು ನವೀಕರಿಸಿ ವಕ್ಫ್ ಬೋರ್ಡ್ ನ ಸಂಕಟದಿಂದ ದೇವಸ್ಥಾನಗಳನ್ನು ರಕ್ಷಿಸಿ ಎಂದು ಸುನಿಲ್ ಘನವಟ್ ಇವರು ಕರೆ ನೀಡಿದರು.


ಈ ಅಧಿವೇಶನದಲ್ಲಿ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠಮ್, ದಿವ್ಯಕ್ಷೇತ್ರ ಹರಿಹರಪುರದ  ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಿಂದ ವಾತಾವರಣ ತೇಜೋಮಯವಾಯಿತು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top