ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಮಾಣಿ ಶಾಲೆಗೆ ಬೆಂಚ್ ಡಸ್ಕ್ ವಿತರಣೆ

Chandrashekhara Kulamarva
0


ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕು ಮಾಣಿ ವಲಯದ ಕರ್ನಾಟಕ ಪ್ರೌಢ ಶಾಲೆಗೆ ಸಮುದಾಯದ ಅಭಿವೃದ್ಧಿ  ಜ್ಞಾನ ದೀಪ ಕಾರ್ಯಕ್ರಮದಡಿ ಮಂಜೂರಾದ ಬೆಂಚು ಡೆಸ್ಕ್‌ಗಳನ್ನು ವಿಟ್ಲ ಯೋಜನಾಧಿಕಾರಿ ರಮೇಶ್ ರವರು ವಿತರಿಸಿ ಶಿಕ್ಷಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆಗಳ ಬಗ್ಗೆ ತಿಳಿಸಿ ಮಕ್ಕಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಾಲೆಯ ಸಂಚಾಲಕ ಹಾಜಿ ಇಬ್ರಾಹಿಂ ಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಮಾಣಿ, ಶಾಲಾ ಮುಖ್ಯ ಶಿಕ್ಷಕ ಚೆನ್ನಪ್ಪ ಗೌಡ, ಸಾರಿಕಾ ಸಹ ಶಿಕ್ಷಕರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top