ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಇದರ ವತಿಯಿಂದ ಬ್ರಹ್ಮಾವರ ಸುಪ್ರೀಂ ಫೀಡ್ಸ್ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ.18 ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಮಿಷನ್ ಆಸ್ಪತ್ರೆ ಉಡುಪಿ ಹಿರಿಯ ವೈದ್ಯಾಧಿಕಾರಿ ಡಾ. ಗಣೇಶ್ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನೇತ್ರ ತಜ್ಞ ಡಾ. ಅಭಿನವ್ ಅಶೋಕ್ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು, ರೋಹಿ ರತ್ನಾಕರ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷ ಸುಂದರ ಪೂಜಾರಿ ಮುಡುಕುಕ್ಕುಡೆ, ನಿಯೋಜಿತ ಅಧ್ಯಕ್ಷ ಅಣ್ಣಯ್ಯ ದಾಸ್ ಮಿಲ್ಟನ್ ಒಲಿವರ್, ರೆನಾಲ್ಟ್, ಶ್ರೀನಾಥ ಕೋಟ, ಗಿರಿಜ ಸಜಿ೯ಕಲ್ನ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ