ಮುಂಡಾಜೆ: ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ

Upayuktha
0


ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿ, ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್, ಗ್ರಾಮ ಪಂಚಾಯಿತಿ ಮುಂಡಾಜೆ, ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ 'ಸೈಬರ್ ಅಪರಾಧ ಜಾಗೃತಿ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿವೈಎಸ್ಪಿ,  ಮಂಜುನಾಥ ಬಿ.ಜಿ, ಎಸ್.ಐ, ಮಂಜುನಾಥ ಟಿ, ಇವರು ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ವಿದ್ಯಾವಂತರು ಕೂಡ ಬಲಿಯಾಗುತ್ತಿರುವ ಸೈಬರ್ ಅಪರಾಧ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಸವಿವರ ಮಾಹಿತಿ ನೀಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.


ವೇದಿಕೆಯಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ, ರೊ| ಸಂದೇಶ ರಾವ್, ರೊ| ಮೇಜರ್ ಜನರಲ್, ಎಂ. ವಿ.ಭಟ್, ರೊ| ಗಾಯತ್ರಿ ಟಿ,  ಪಿಡಿಓ, ಗ್ರಾಮ ಪಂಚಾಯಿತ್ ಮುಂಡಾಜೆ, ಶ್ರೀಮತಿ ಸುಮಲತಾ, ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಮುಂಡಾಜೆ, ಶ್ರೀಮತಿ ಗೀತಾ, ಇತಿಹಾಸ ಉಪನ್ಯಾಸಕಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿ ಲತೇಶ್ ನಿರ್ವಹಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ, ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿ, ಕುಮಾರಿ ಛಾಯ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top