ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವವು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ಟರ ಅಧ್ಯಕ್ಷತೆಯಲ್ಲಿ ಜನವರಿ, 2 ರಂದು ಜರಗಿತು. ಸ್ನೇಹ ಟೆಕ್ಸ್ಟೈಲ್ಸ್, ಅರ್ಲಪದವು ಇದರ ಮಾಲಕರಾದ ವರದರಾಯ ನಾಯಕ್ ಅವರು ಕ್ರೀಡೋತ್ಸವವನ್ನು ಉದ್ಘಾಟಿಸಿ ಧ್ವಜಾರೋಹಣ ಮಾಡಿ ಕ್ರೀಡೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿನಿ ದೀಪಿಕಾ ಪ್ರಾರ್ಥಿಸಿದರು. ಶಾಲಾ ನಾಯಕ ಹತ್ತನೇ ತರಗತಿಯ ಜಿತೇಶ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ ಏರೋಬಿಕ್ಸ್ ಪ್ರದರ್ಶಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ವಂದಿಸಿದರು ಹಾಗೂ ಅವರ ಮಾರ್ಗದರ್ಶನದಲ್ಲಿ ವಿವಿಧ ಆಟೋಟಗಳು ಜರಗಿದವು. ಸಹ ಶಿಕ್ಷಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕಡಂದೇಲು ಈಶ್ವರ ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಆರ್ಲಪದವು ಹಾಗೂ ಉಪಾಧ್ಯಕ್ಷ ಜಯಶ್ರೀ ದೇವಸ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಹಿರಿಯ ವಿದ್ಯಾರ್ಥಿಗಳು ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ