ವಿವೇಕಾನಂದ ಕಾಲೇಜ್; ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಿಕಾಕೌಶಲ ಹಾಗೂ ತಂತ್ರದ (learning skills & strategies) ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. 


ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ತಜ್ಞರು ಹಾಗೂ NLP ತರಬೇತುದಾರ ಪುಷ್ಪರಾಜ್‌ ಕಾಸರಗೋಡು ಇವರು ಭಾಗವಹಿಸಿದರು. ಕಲಿಕಾ ವಿಧಾನಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಸಬೇಕಾದ ತಯಾರಿಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 


ಕಾರ್ಯಾಗಾರದಲ್ಲಿ ಉಪಪ್ರಾಂಶುಪಾಲ ದೇವಿಚರಣ್‌ ರೈ ಹಾಗೂ ಇಲೆಕ್ಟ್ರಾನಿಕ್ಸ್‌ ವಿಭಾಗದ ಮುಖ್ಯಸ್ಥ ಭೀಮ ಭಾರದ್ವಾಜ್‌ ಇವರು ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಶ್ರುತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top