ವಿವೇಕಾನಂದ ಪಿಯು ಕಾಲೇಜು: ಪ್ರಥಮ ವಿಜ್ಞಾನ ವಿಭಾಗದ ಪೋಷಕರ ಸಭೆ

Upayuktha
0




ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ.


ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳು ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು.

      

ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರು ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರಾದ ಭೀಮ ಭಾರಧ್ವಾಜ್ ಪರೀಕ್ಷಾ ತಯಾರಿಗಳ ಬಗ್ಗೆ ಹಾಗೂ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್‌, ಸಿ.ಇ.ಟಿ ಪರೀಕ್ಷಾ ತರಬೇತಿಗಳ ಕುರಿತಾಗಿ ವಿವರವಾದ ಮಾಹಿತಿಯನ್ನು ನೀಡಿದರು.


ಈ ಸಭೆಯಲ್ಲಿ ಕ್ರೀಡಾ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪ್ರಥಮ ವಿಜ್ಞಾನ ವಿಭಾಗದ ಸಮೃದ್ಧಿ ಜೆ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು.


ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭೌತಶಾಸ್ತ್ರ  ವಿಭಾಗದ ಉಪನ್ಯಾಸಕಿ ದೀಕ್ಷಿತಾ ಬಿ ನಿರೂಪಿಸಿ, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಖದಾದೇವಿ ಸಿ ಆರ್ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top