ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ಪೋಷಕರ ಸಭೆ

Upayuktha
0





ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. 


ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವಸಿದ್ಧತಾ ಪರೀಕ್ಷೆಗಳು, ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು.


ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕಿ ಅರುಣ ಇವರು ಪರೀಕ್ಷಾ ತಯಾರಿಯ ಕುರಿತು, ಪ್ರಶ್ನೆ ಪತ್ರಿಕಾ ಮಾದರಿಯಲ್ಲಿನ ಬದಲಾವಣೆಗಳು, ಗಣಕಶಾಸ್ತ್ರ ವಿಭಾಗದ ಪ್ರಾಯೋಗಿಕ ಪರೀಕ್ಷೆ, ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗಾಗಿ ಪರಿಹಾರ ಬೋಧನೆಯ ತರಗತಿಗಳು ಹಾಗೂ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ನೀಡಿದರು.


ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ ಅವರು, ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಹಿಸಬೇಕಾದ ಎಚ್ಚರಿಕೆಯ ಕುರಿತು ಕಿವಿ ಮಾತು ಹೇಳಿದರು.  


ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್‌ ರೈ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಯಶವಂತಿ ಕಾರ್ಯಕ್ರಮ ನಿರೂಪಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್‌ ಶೆಟ್ಟಿಗಾರ್‌ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.


ಶೈಕ್ಷಣಿಕ ಸಂಯೋಜಕ ಶ್ರೀವತ್ಸ ವಂದಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top