ಸಂಕ್ರಾಂತಿ ಜಾನಪದ ಸಂಭ್ರಮ: ಮಹಿಳೆಯರಿಗಾಗಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ

Upayuktha
0


ಉಡುಪಿ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ, ಕಜಾಪ ಕುಂದಾಪುರ ತಾಲೂಕು ಹಾಗೂ ರೋಟರಿ ಸಮುದಾಯ ದಳ ಕೊರವಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಜ.14 ಮಂಗಳವಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭಾಗಣ ಕೊರವಾಡಿಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ ಅಧ್ಯಕ್ಷ ಆನಂದ ಪೂಜಾರಿ ನೆರವೇರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣಿೀಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂರ್ವ ಸಂಪತ್ತಾಗಿದೆ. ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ, ಇದಕ್ಕೆ ಧಾರ್ಮಿಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು.


ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷ ಸತೀಶ್ ಎಂ.ನಾಯ್ಕ್, ಸಮುದಾಯ ದಳ ಕೊರವಡಿ ಅಧ್ಯಕ್ಷ ಕೆ ಸುರೇಶ್ ವಿಠಲವಾಡಿ, ಸ್ಥಾಪಕ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ನರಸಿಂಹ ನಾಯಕ್, ತೀರ್ಪುಗಾರರಾದ ಸಿಂಧು ಐತಾಳ, ರವಿಕಟ್ಕರೆ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕುಂದಾಪುರ ತಾಲೂಕು ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಂಧ್ಯಾ ಹೆಗಡೆ ನಿರೂಪಿಸಿದರು. ವಿಜೇತರಿಗೆ ನಗದು ಬಹುಮಾನದೊಂದಿಗೆ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top