ಟೀಷ್ಮಾ ಗೌಡ ಕೆ.ಆರ್ ಹಾಸನ್‌ಗೆ 'ಶಾರದ ಸುಪುತ್ರಿ' ಪ್ರಶಸ್ತಿ

Upayuktha
0


ಹಾಸನ: ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿಯಿಂದ ಜ.12 ರಂದು ನಡೆಯುವ ಕಾರ್ಯಕ್ರಮದಲ್ಲಿ ಹಾಸನ ನಗರದ ನೃತ್ಯಗಾರ್ತಿ, ಯುವ ಬರಹಗಾರ್ತಿ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಟೀಷ್ಮಾ ಗೌಡ ಕೆ.ಆರ್ ಹಾಸನ್ ಅವರಿಗೆ "ಶಾರದಾ ಸುಪುತ್ರಿ ಪ್ರಶಸ್ತಿ" ನೀಡಿ ಗೌರವಿಸಲಾಗುವುದು.


ಸಮಿತಿಯ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮ ಅಂದು ನಡೆಯಲಿದ್ದು, ಅದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಜಿಲ್ಲಾಧ್ಯಕ್ಷ ರವಿಕಿರಣ್ ತಿಳಿಸಿದ್ದಾರೆ. ಪ್ರಶಸ್ತಿ ಪಡೆಯುತ್ತಿರುವ ಟೀಷ್ಮಾ ಗೌಡ.ಕೆ.ಆರ್.ಹಾಸನ್ ಅವರು ಮಂಜುನಾಥ್ ಹೆಚ್.ಎಸ್ ಮತ್ತು ತಾಯಿ ಶ್ರೀಮತಿ ಹೆಚ್.ಎಸ್. ಪ್ರತಿಮಾ ಹಾಸನ್ ಅವರ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top