ಜ.14ರಂದು ಮಂಗಳೂರು ಪುರಭವನದಲ್ಲಿ ಸ್ವರ ಸಂಕ್ರಾಂತಿ ಉತ್ಸವ- 2025

Upayuktha
0


ಮಂಗಳೂರು: ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ `ಸ್ವರ ಸಂಕ್ರಾಂತಿ ಉತ್ಸವ- 2025' ಸಂಗೀತ ಕಛೇರಿ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಏರ್ಪಡಿಸಲಾಗಿದೆ.


ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಮೂವರು ಹಿರಿಯ ಕಲಾ ಸಾಧಕರಿಗೆ `ಸ್ವರ ಸಾಧನಾ' ಪ್ರಶಸ್ತಿ ಪ್ರದಾನ ನಡೆಯಲಿದೆ.


ಸಂಜೆ 5 ಗಂಟೆಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತದ ಖ್ಯಾತ ಕಲಾವಿದರಾದ ರಂಜನಿ- ಗಾಯತ್ರಿ ಅವರಿಂದ ವಿಶಿಷ್ಟ ಪರಿಕಲ್ಪನೆಯ `ರಸ ಬೈ ರಾಗ' ಸಂಗೀತ ಕಛೇರಿ ನಡೆಯಲಿದೆ. ವಯಲಿನ್‍ನಲ್ಲಿ ವಿದ್ವಾನ್ ವಿಠ್ಠಲ್ ರಂಗಲ್, ಮೃದಂಗದಲ್ಲಿ ವಿದ್ವಾನ್ ಸಾಯಿ ಗಿರಿಧರ್, ಘಟಂನಲ್ಲಿ ವಿದ್ವಾನ್ ಎಸ್.ಕೃಷ್ಣ ಸಹಕರಿಸಲಿದ್ದಾರೆ.


ರಂಜನಿ ಮತ್ತು ಗಾಯತ್ರಿ ಕರ್ನಾಟಿಕ್ ಸಂಗೀತ ಪ್ರಕಾರದಲ್ಲಿ ಉನ್ನತ ಸಾಧನೆ ಮಾಡಿರುವ ಕಲಾವಿದರಾಗಿದ್ದು, ರಸ ಬೈ ರಾಗ ಪರಿಕಲ್ಪನೆಯಲ್ಲಿ ದೇಶ ವಿದೇಶದಲ್ಲಿ ಪ್ರವಾಸ ಮಾಡಿ ಸಂಗೀತ ಪ್ರಸ್ತುತಿ ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಮಂಗಳೂರಿನ ಸಂಗೀತ ಪ್ರೇಮಿಗಳಿಗೆ ಈ ಪರಿಕಲ್ಪನೆಯ ಸಂಗೀತ ಕಛೇರಿಯನ್ನು ಆಸ್ವಾದಿಸುವ ಅವಕಾಶವನ್ನು ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಷನ್ ಕಲ್ಪಿಸಿದೆ.




ಸಂಗೀತ ಪ್ರೇಮಿಗಳು ಪ್ರವೇಶ ಪತ್ರದ ಮೂಲಕ ಉಚಿತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಪ್ರವೇಶ ಪತ್ರವನ್ನು ಪತ್ತುಮುಡಿ ಜನತಾ ಡಿಲಕ್ಸ್ ಹೋಟೆಲ್ ಸಮೀಪದ ತಕ್ಷಿಲಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಎ-1 ಲಾಜಿಕ್ಸ್ ಸಂಸ್ಥೆಯ ಕಚೇರಿಯಿಂದ ಪಡೆದುಕೊಳ್ಳಬಹುದು ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರವೇಶ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top