ಮಂಗಳೂರು: ಕರ್ನಾಟಕ ಸರಕಾರದ 2024 ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ಆಯ್ಕೆಯಾಗಿದ್ದಾರೆ.
ಯು.ಕೆ ಕುಮಾರನಾಥ್ ಅವರು ಮಂಗಳೂರಿನಲ್ಲಿ ವಿಜಯ ಕರ್ನಾಟಕದ ಸ್ಥಾನೀಯ ಸಂಪಾದಕರಾಗಿ ಸುಮಾರು 23 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು, ಮೂಲತಃ ಉಡುಪಿಯವರು.
ವಿಜಯ ಕರ್ನಾಟಕ ಸೇರುವ ಮೊದಲು ಮುಂಬಯಿಯಲ್ಲಿ ಕರ್ನಾಟಕ ಮಲ್ಲ, ಮಂಗಳೂರಿನಲ್ಲಿ ಕನ್ನಡ ಜನಾಂತರಂಗ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ತಮ್ಮ ಕರ್ತವ್ಯದ ಅವಧಿಯುದ್ದಕ್ಕೂ ಹಲವಾರು ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ಮಾಡಿ ಬೆಳೆಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ