ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮ

Upayuktha
0




ಉಜಿರೆ : ಎಸ್. ಡಿ. ಎಮ್. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಸರಕಾರಿ ಪ್ರೌಢ ಶಾಲೆ, ಮಿತ್ತಬಾಗಿಲು ಇಲ್ಲಿನ ಒಂಭತ್ತನೆಯ ಹಾಗು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಬ್  ಇನ್ ಕ್ಯಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಏಕದಳ ಹಾಗೂ ದ್ವಿದಳ ಸಸ್ಯದ ಕಾಂಡದ ಒಳ ರಚನೆಯನ್ನು, ಮತ್ತು ಜಲ ಸಸ್ಯಗಳ ಒಳ  ರಚನೆಯನ್ನು ಸೂಕ್ಷ್ಮದರ್ಶಕದ ಸಹಾಯದಿಂದ ವಿವರಿಸಲಾಯಿತು. ಹಾಗೂ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವಾರು ಕುತೂಹಲಕಾರಿಯಾದ ಪ್ರಯೋಗಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯರಾದ ಶಕುಂತಲಾ ಬಿ. , ಮಂಜುಶ್ರೀ ಕೆ ಹಾಗೂ ಕುಮಾರಿ ಭವ್ಯ ಡಿ ನಾಯಕ್ ಇವರು ನಡೆಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ದಿತೀಯ ಬಿ.ಎಸ್ಸಿ ವಿದ್ಯಾರ್ಥಿಯರಾದ ಪ್ರಥಮ್, ಪದ್ಮ ಶ್ರೀ ಹಾಗೂ ಮೇಘ ಇವರು ಸಹಕರಿಸಿದರು. 


ಶಾಲೆಯ ಮುಖ್ಯೋಪಾಧ್ಯಾಯರಾದ  ಗೋಪಾಲ ಹಾಗೂ ವಿಜ್ಞಾನ ಶಿಕ್ಷಕಿಯರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಸುಮಾರು 80 ವಿದ್ಯಾರ್ಥಿಗಳು  ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top