ಫೆ.8: ಹಿಂದೂ ಬಾಂಧವರಿಗೆ ಹಿಂದೂ ರಾಷ್ಟ್ರ ಜಾಗೃತಿ ಸಭೆ

Upayuktha
0

ಹಿಂದೂ ರಾಷ್ಟ್ರ ಮತ್ತು ಹಿಂದೂ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸಲು ಹಿಂದೂ ರಾಷ್ಟ್ರ-ಜಾಗೃತಿ ಸಭೆ. 



ಬೆಂಗಳೂರು: ಇಂದು ಹಿಂದೂ ಧರ್ಮದ ಮೇಲೆ ಆನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್,  ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವುದು, ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರ್ಕಾರಿಕರಣ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ, ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. 


ಅದಕ್ಕಾಗಿ ಹಿಂದೂಗಳನ್ನು ಜಾಗೃತ ಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.


ಸಮಿತಿಯು ಕಳೆದ 12 ವರ್ಷಗಳಿಂದ13 ರಾಜ್ಯಗಳಲ್ಲಿ, 7 ಭಾಷೆಗಳಲ್ಲಿ ಮತ್ತು2000 ಕ್ಕೂ ಅಧಿಕ ಸ್ಥಳಗಳಲ್ಲಿ ನಿಯೋಜಸಿ 20 ಲಕ್ಷಕ್ಕಿಂತಲೂ ಆಧಿಕ ಹಿಂದೂಗಳನ್ನು ಜಾಗೃತಿ ಮಾಡಲಾಗಿದೆ.


ಜಿಗಣಿಯ ಧರ್ಮಸಭೆಯ ವಿವರ :

ಸ್ಥಳ :  ಪುರಂದರ ಮಂಟಪ, ನಿಸರ್ಗ ಲೇಔಟ್, ಜಿಗಣಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ದಿನಾಂಕ : ೦8 ಫೆಬ್ರವರಿ 2025    ವಾರ : ಶನಿವಾರ     ಸಮಯ : ಸಾಯಂಕಾಲ ೦5.೦೦ ಗಂಟೆಗೆ


ಈ ಸಭೆಯಲ್ಲಿ ಹಿಂದೂ ಧರ್ಮಜಾಗೃತಿ ಮತ್ತು ಹಿಂದೂ ರಾಷ್ಟ್ರ ಸ್ಥಾಪನೆ ಉದ್ದೇಶದಿಂದ ಫ್ಲ್ಲೆಕ್ಸ್ ಪ್ರದರ್ಶನ ಮತ್ತು ಗ್ರಂಥ ಪ್ರದರ್ಶನವನ್ನು ಆಯೋಜಿಸಿದೆ, ಅನೇಕ ಹಿಂದೂ ನಾಯಕರು ಮಾರ್ಗದರ್ಶನ ಮಾಡಲಿದ್ದಾರೆ. ಈ ಹಿಂದೂ ರಾಷ್ಟ್ರ-ಜಾಗೃತಿ ಸಭೆಗೆ ಸಮಸ್ತ ಹಿಂದೂ ಬಾಂಧವರು ಆಗಮಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ  ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top