ಫೆ.15: ಹಿಂದೂ ರಾಷ್ಟ್ರ, ಧರ್ಮದ ಬಗ್ಗೆ ಜನಜಾಗೃತಿ ಸಭೆ

Upayuktha
0

ಬೆಂಗಳೂರು: ಹಿಂದೂ ಧರ್ಮದ ಮೇಲೆ ಅನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವವರಿಗೆ ರಕ್ಷಣೆ , ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ದೇವಸ್ಥಾನದ ಹುಂಡಿಯ ಹಣದ ಮೇಲೆ ಸರಕಾರಗಳ ವಕ್ರದೃಷ್ಟಿ, ದೇವಸ್ಥಾನದ ನಿರ್ವಹಣೆಯಲ್ಲಿ ಅನ್ಯ ಧರ್ಮಿಯರ ಹಸ್ತಕ್ಷೇಪ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ.


ಹಿಂದೂಗಳ ಹಬ್ಬಗಳ ಮೆರವಣಿಗೆಯ ಮೇಲೆ ದಾಳಿ, ಇಸ್ಲಾಮಿಕ್ ರಾಷ್ಟ್ರಕ್ಕಾಗಿ ಸಂಚು, ಜಾತಿ ಜಾತಿಗಳಿಂದ ಹಿಂದೂಗಳನ್ನು ಒಡೆದಾಳುವಿಕೆ ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ಹಿಂದೂಗಳನ್ನು ಜಾಗೃತಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.


ಸಮಿತಿಯು ಕಳೆದ 12 ವರ್ಷಗಳಿಂದ 13 ರಾಜ್ಯಗಳಲ್ಲಿ, 7 ಭಾಷೆಗಳಲ್ಲಿ ಮತ್ತು 2,000 ಕ್ಕೂ ಅಧಿಕ ಸ್ಥಳಗಳಲ್ಲಿ ನಿಯೋಜಸಿ 20 ಲಕ್ಷಕ್ಕಿಂತಲೂ ಆಧಿಕ ಹಿಂದೂಗಳನ್ನು ಜಾಗೃತಿ ಮಾಡಲಾಗಿದೆ.


ನೆಲಮಂಗಲದ ಧರ್ಮಸಭೆಯ ವಿವರ !

ಸ್ಥಳ : ಚಿಕ್ಕಯಲ್ಲಯ್ಯ ಸಮುದಾಯ ಭವನ, ಅಡೇಪೇಟೆ ರಸ್ತೆ, ನೆಲಮಂಗಲ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ದಿನಾಂಕ : 15 ಫೆಬ್ರವರಿ 2025  

ವಾರ : ಶನಿವಾರ  

ಸಮಯ : ಸಾಯಂಕಾಲ 05.00 ಗಂಟೆಗೆ


ಈ ಸಭೆಯಲ್ಲಿ ಹಿಂದೂ ಧರ್ಮಜಾಗೃತಿ ಮತ್ತು ಹಿಂದೂ ರಾಷ್ಟ್ರ ಸ್ಥಾಪನೆ ಉದ್ದೇಶದಿಂದ ಫ್ಲ್ಲೆಕ್ಸ್ ಪ್ರದರ್ಶನ ಮತ್ತು ಗ್ರಂಥ ಪ್ರದರ್ಶನವನ್ನು ಆಯೋಜಿಸಿದೆ, ಅನೇಕ ಹಿಂದೂ ನಾಯಕರು ಮಾರ್ಗದರ್ಶನ ಮಾಡಲಿದ್ದಾರೆ. ಈ ಹಿಂದೂ ರಾಷ್ಟ್ರ-ಜಾಗೃತಿ ಸಭೆಗೆ ಸಮಸ್ತ ಹಿಂದೂ ಬಾಂಧವರು ಆಗಮಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ  ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top