ಮಹಾಕುಂಭಮೇಳದಲ್ಲಿ ಭಾಗವಹಿಸಿದ ಮಾಜಿ ಸಚಿವ ಶ್ರೀರಾಮುಲು ಕುಟುಂಬ

Upayuktha
0


 

ಬಳ್ಳಾರಿ: ಮಾಜಿ ಸಚಿವರಾದ ಬಿ.ಶ್ರೀರಾಮುಲು ರವರು ಕುಟುಂಬದ  ಸಮೇತ ನಂಬಿಕೆ,ಭಕ್ತಿ ಮತ್ತು ಆಧ್ಯಾತ್ಮಿಕತೆಯ ಸಂಗಮವಾದ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ದೈವಿಕ ಮತ್ತು ಭವ್ಯ ಮಹಾಕುಂಭಕ್ಕೆ ಕುಟುಂಬದ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.


ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ, ಈ ಪವಿತ್ರ ಮಹಾಕುಂಭ ಮೇಳದಲ್ಲಿ ಭಾಗವಹಿಸುತ್ತಿರುವುದು ನನಗೆ ಅತ್ಯಂತ ಗೌರವದ ಸಂಗತಿ, ಇದು ಸಮಾಜದಲ್ಲಿ ಸೌಹಾರ್ದ್ಯ, ಶಾಂತಿ, ಮತ್ತು ಸಜ್ಜನತೆ ಹರಡುವ ಅದ್ಭುತ ಅವಕಾಶವಾಗಿದೆ ಎಂದರು. 


ನಾವು ನಮ್ಮ ಸಂಸ್ಕೃತಿಯ ಬೆಳಕನ್ನು ಮುಂದಿನ ಪೀಳಿಗೆಯವರಿಗೆ ತಲುಪಿಸುವ ಜವಾಬ್ದಾರಿ ಹೊಂದಿದ್ದೇವೆ. ಹೀಗಾಗಿ, ಇಂತಹ ಧಾರ್ಮಿಕ ಉತ್ಸವಗಳಲ್ಲಿ ಶ್ರದ್ಧೆಯಿಂದ ಭಾಗವಹಿಸಿ, ಸನಾತನ ಧರ್ಮದ ಮೌಲ್ಯಗಳನ್ನು ಜೀವಿಸುವ ಮತ್ತು ಉಳಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top