ವೈವಿಧ್ಯಮಯ ಸಾಹಿತ್ಯದಿಂದ ಭಾಷೆ ಸಮೃದ್ಧ: ಮುದ್ದು ಮೂಡುಬೆಳ್ಳೆ

Upayuktha
0

ತುಲುವೆರೆ ಕಲ ‘ಉದಿಪು ನೇಸರೆ’ ಕವಿಗೋಷ್ಠಿ



 

ಮಂಗಳೂರು: ವೈವಿಧ್ಯತೆಯಿಂದ ಕೂಡಿದ ಸಾಹಿತ್ಯ ಪ್ರಕಾರಗಳ ರಚನೆ ಭಾಷೆಯ ಬೆಳವಣಿಗೆಗೆ ಪೂರಕ. ಈ ನಿಟ್ಟಿನಲ್ಲಿ ಕವಿ, ಸಾಹಿತಿಗಳು ಗಮನಹರಿಸಬೇಕು. ಭಾಷೆಯ ಬಗೆಗಿನ ತುಡಿತ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗುತ್ತದೆ ಎಂದು ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಹೇಳಿದರು. 


ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಉದಿಪು ನೇಸರೆ’ ತುಳು ಕವಿಗೋಷ್ಠಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.


ಉದ್ಯಾನದಲ್ಲಿ ಅರಳುವ ಪುಷ್ಪಗಳ ರೀತಿ ಬಹುಬಗೆಯ ಸಾಹಿತ್ಯ ರಚನೆಯಿಂದ ಕವಿ, ಸಾಹಿತಿಗಳು ಪರಿಪೂರ್ಣತೆ ಪಡೆಯಲು ಸಾಧ್ಯ ಎಂದರು. 

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,  ಹಿರಿಯ ಸಾಹಿತಿ ಸದಾನಂದ ನಾರಾವಿ  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ಅಗಲಿದ ಪತ್ರಕರ್ತ ಶಶಿ ಬಂಡಿಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ‘ತುಲುವೆರೆ ಕಲ’ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವು ದರಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ  ಎಂದರು.


ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್ ಜತೆ ಕಾರ್ಯದರ್ಶಿ ಪ್ರಭಾ ಚಂದ್ರಶೇಖರಯ್ಯ ಉಪಸ್ಥಿತರಿದ್ದರು. ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ ಸ್ವಾಗತಿಸಿದರು. ರಾಜೇಶ್ ಶೆಟ್ಟಿ ದೋಟ ವಂದಿಸಿದರು. ಶ್ರೀಶಾವಾಸವಿ ಕಾರ್ಯಕ್ರಮ ನಿರೂಪಿಸಿದರು.

  

ಭಾಗವಹಿಸಿದ ಕವಿಗಳು:

ಕವಿಗೋಷ್ಠಿಯಲ್ಲಿ ಜಯರಾಮ ಪಡ್ರೆ, ಅಶ್ವಿಜಾ ಶ್ರೀಧರ್, ಉಮೇಶ್ ಶಿರಿಯ, ರಂಜಿತ್ ಸಸಿಹಿತ್ಲು, ಸತೀಶ್ ಬಿಳಿಯೂರು, ಬಾಲಿನಿ ಎನ್.ಕರ್ಕೇರಾ, ಅಶೋಕ ಎನ್. ಕಡೇಶಿವಾಲಯ, ಅಶ್ವತ್ಥ್ ಬರಿಮಾರು, ಶಶಿಕಲಾ ಭಾಸ್ಕರ್ ದೈಲಾ, ಆಕೃತಿ ಭಟ್, ನಿಶಾನ್ ಅಂಚನ್, ಅಶ್ವಿನಿ ತೆಕ್ಕುಂಜ, ಮಲ್ಲಿಕಾ ಜೆ.ರೈ ಗುಂಡ್ಯಡ್ಕ, ಪದ್ಮನಾಭ ಪೂಜಾರಿ ಬಂಟ್ವಾಳ, ಪರಿಮಳಾ ಮಹೇಶ್ ರಾವ್, ಶ್ರೀಶಾವಾಸವಿ ತುಳುನಾಡ್, ಮುರಳೀಧರ ಆಚಾರ್ಯ, ಅನುರಾಧಾ ರಾಜೀವ್ ಸುರತ್ಕಲ್, ವಿಶ್ವನಾಥ ಕುಲಾಲ್ ಮಿತ್ತೂರು, ರೇಮಂಡ್ ಡಿ’ಕುನ್ಹ ತಾಕೊಡೆ, ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ, ರಾಜೇಶ್ ಶೆಟ್ಟಿ ದೋಟ, ಶ್ಯಾಮ್‌ಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಪ್ರಶಾಂತ್ ಆಚಾರ್ಯ, ಅನನ್ಯಾ ಕರ್ಕೇರ, ಸವಿತಾ ಕರ್ಕೇರ, ವೈಷ್ಣವಿ ಸುಧೀಂದ್ರ ರಾವ್ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top