ಮಧೂರು ಬ್ರಹ್ಮಕಲಶೋತ್ಸವ: ಮುಳಿಯಾರು ಬಯಲು ಪ್ರಾದೇಶಿಕ ಸಮಿತಿ ರಚನಾ ಸಭೆ

Upayuktha
0


ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವದ ಅಂಗವಾಗಿ ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಭಾನುವಾರ (ಫೆ.2) ಮುಳಿಯಾರು ಬಯಲು ಪ್ರಾದೇಶಿಕ ಸಮಿತಿ ರೂಪೀಕರಣ ಸಭೆ ಜರಗಿತು.


ಮಾಧವನ್ ಆಲುಂಗಾಲು ಅಧ್ಯಕ್ಷ ಸ್ಥಾನ ವಹಿಸಿದರು. ಸೀತಾರಾಮ ಬಳ್ಳುಳ್ಳಾಯ ಶುಭಾಶಯವಿತ್ತರು. ವಾಮನ ಆಚಾರ್ಯ ಸಾಂದರ್ಭಿಕ  ಮಾತುಗಳನ್ನಾಡಿದರು. ರಾಜನ್ ಮುಳಿಯಾರು ದಿಕ್ಸೂಚೀ ಮಾತುಗಳನ್ನಾಡಿದರು. ಗೋವಿಂದ ಬಳ್ಳಮೂಲೆ ಸಮಿತಿಯ ಕಾರ್ಯ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಗಳನ್ನಿತ್ತರು.


ಸಭೆಯಲ್ಲಿ ಕಾರ್ಯಕಾರೀ ಸಮಿತಿಯನ್ನು ರಚಿಸಲಾಯಿತು. ಮಾಧವನ್ ಆಲುಂಗಾಲು ಅಧ್ಯಕ್ಷರು, ಸುಧಿ ಮುಳಿಯಾರು ಕಾರ್ಯದರ್ಶಿ, ಮನೋಜ್ ಕೋಶಾಧಿಕಾರಿ, ಮಾತೃ ಸಮಿತಿ ಅಧ್ಯಕ್ಷೆ ನಿಶಾ ನರಿಕ್ಕೋಳು, ಮಾತೃ ಸಮಿತಿ ಕಾರ್ಯದರ್ಶಿ ಶೈಲಜಾ ಮತ್ತು ಇತರ ಸದಸ್ಯರುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.


ಸುಧಿ ಮುಳಿಯಾರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಭೆಯಲ್ಲಿ ನಿವೇದನಾ ಪತ್ರ ಮತ್ತು ರಶೀದಿ ಪುಸ್ತಕಗಳನ್ನು ಸಮಿತಿಯವರಿಗೆ ಹಸ್ತಾ೦ತರಿಸಲಾಯಿತು. ಆಯ್ಕೆ ಮಾಡಲಾದ ಪದಾಧಿಕಾರಿಗಳು ಸ್ಥಾನವನ್ನು ಸ್ವೀಕರಿಸಿದ ಬಳಿಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top