ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಗಣಿತ ಮಾದರಿ ಪ್ರದರ್ಶನ

Upayuktha
0

 

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಸಿಯಲ್ಲಿ ಶನಿವಾರ ಗಣಿತ ಮಾದರಿ ಪ್ರದರ್ಶನ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪಪ್ರಾಂಶುಪಾಲೆ ಶೈನಿ ಜೆ. ಮಾತನಾಡಿಶಾಲಾ ಮಕ್ಕಳು ಯಾವಾಗಲೂ ಕಠಿಣ ಪರಿಶ್ರಮ ಮಾಡುವುದಕ್ಕಿಂತಲೂ ಹೆಚ್ಚು ಜಾಣತನದ ಪರಿಶ್ರಮ ಮಾಡಬೇಕಿರುವುದು ಈಗ ಅನಿವಾರ್ಯವಾಗಿದೆ ಎಂದು ಹೇಳಿದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಮಾತನಾಡಿ ಎಲ್ಲಾ ಗಣಿತ ವಿಜ್ಞಾನ ವಿಷಯಗಳಿಗೆ ತಾಯಿ ಇದ್ದಂತೆ. ದೈನಂದಿನ ಜೇವನದಲ್ಲಿ ಗಣಿತದ ಲೆಕ್ಕಗಳು ಹಾಸುಹೊಕ್ಕಂತಿದೆ. ಇತರೆ ವಿಷಯಗಳನ್ನು ಅರ್ಥ ಮಾಡಿಕೊಳ್ಳಬೇಕಾದರೆ ಗಣಿತ ಅಗತ್ಯ ಎಂದರು. 


ಐದು, ಆರು ಹಾಗೂ ಏಳನೇ ತರಗತಿಯ ವಿದ್ಯಾರ್ಥಿಗಳು ಗಣಿತ ಮಾದರಿ ತಯಾರಿಸಿ ಪ್ರದರ್ಶಿಸಿದರು. ಅತಿಥಿಗಳು, ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಗಣಿತ ಮಾದರಿ ವೀಕ್ಷಿಸಿ ಅವರ ಕೆಲಸವನ್ನು ಪ್ರಶಂಸಿದರು. ವಿದ್ಯಾರ್ಥಿಗಳಾದ ಸನ್ಮಯ್ ಸ್ವಾಗತಿಸಿದರು, ಅನ್ವಿತಾ ವಂದಿಸಿದರು. ಶ್ರೀರಾಮ್ ಏಲ್. ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top