ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಜಿತ್‌ಗೆ ಸನ್ಮಾನ

Upayuktha
0


 

ಪುತ್ತೂರು: ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಸಿ.ಸಿ ಕೆಡೆಟ್‌ JUO ಸುಜಿತ್‌ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. 


ಇವರು 4/19 KAR BN NCC MADIKERI̧ KARNATAKA & GOA DIRECTORATE ನ್ನು ಪ್ರತಿನಿಧಿಸಿ ಪಥಸಂಚಲನಕ್ಕೆ ಆಯ್ಕೆಯಾಗಿದ್ದರು. ಕಡಬ ತಾಲೂಕಿನ  ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರೈಸಿರುತ್ತಾರೆ. 


ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಸನ್ಮಾನಿಸಿ,  ಅಭಿನಂದಿಸಿರುತ್ತಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top