ಹೆಸರಾಂತ ಜ್ಯೋತಿಷಿ ಯರ್ಮುಂಜ ಶಂಕರ ಜೋಯಿಸರು ನಿಧನ

Upayuktha
0



ಪುತ್ತೂರು: ದೃಗ್ಗಣಿತ ರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮ ಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು (ವಯಸ್ಸು: 72) ಅಂಗರಜೆಯ ಸ್ವಗೃಹದಲ್ಲಿ ದಿನಾಂಕ 8-2-2025 ಶನಿವಾರದಂದು ದಿವಂಗತರಾಗಿರುವರು. 


ಯರ್ಮುಂಜ ಭೀಮ ಜೋಯಿಸರ ಮಗನಾದ ಇವರು ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದ ಯರ್ಮುಂಜ ಶಂಕರ ಜೋಯಿಸರ ಮೊಮ್ಮಗ. ಧರ್ಮಶಾಸ್ತ್ರದಲ್ಲಿಯೂ ಇವರ ಪಾಂಡಿತ್ಯವು ಅಗಾಧವಾಗಿತ್ತು. ಹಲವು ಜೌತಿಷ ವಿದ್ವತ್ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ವಾಸ್ತುಪ್ರಕಾರ ಅನೇಕ ಗೃಹನಿರ್ಮಾಣಕ್ಕೆ ಮಾರ್ಗದರ್ಶನವನ್ನು ನೀಡುರುವರು.


ಇವರು ಬೈಲೂರು ಅನಂತಪದ್ಮನಾಭ ತಂತ್ರಿ ಸಂಸ್ಮರಣಾ ಪ್ರಶಸ್ತಿ (2O18), ಪೋಳ್ಯ ಲ. ವೆಂ. ಮಠ-ತತ್ತ್ವ ಧರ್ಮ ಸಭಾ-ಸನ್ಮಾನ ಪತ್ರ (2019), ಮಿತ್ತೂರು ಸಂಪ್ರತಿಷ್ಠಾನ- ವಿದ್ವತ್ ಪ್ರಶಸ್ತಿ (2019), ಕಿಳಿಂಗಾರು ವಸಿಷ್ಠ ಪ್ರಶಸ್ತಿ 2022 ಮುಂತಾದ ಪ್ರಶಸ್ತಿ ಭಾಜನರು. 


ಉಡುಪಿಯ ಪುತ್ತಿಗೆ ಮಠದ ಮುಖ್ಯ ಪ್ರಾಣ ಶ್ರೀಕೃಷ್ಣ ಪಂಚಾಂಗಕ್ಕೆ ಗಣಿತ, ಸುಪ್ರಸಿದ್ಧ ಶಾರದಾ, ಹೊಸ ದಿಗಂತ, ಬೆಂಗಳೂರು ಮುದ್ರಣಾಲಯ, ಪ್ರಜಾವಾಣಿ ಇತ್ಯಾದಿ ಹತ್ತು ಹಲವು ಕ್ಯಾಲೆಂಡರ್ ಹಾಗೂ ಡೈರಿಗಳಿಗೆ ಸಂಪೂರ್ಣ ಪಂಚಾಂಗ ಮಾಹಿತಿಗಳನ್ನು ನೀಡುತ್ತಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top