ಸೇಂಟ್ ಅಲೋಶಿಯಸ್ ಎಂಎಜೆಎಂಸಿ ವಿದ್ಯಾರ್ಥಿಗಳಿಂದ 'ಮುಟ್ಟಿನ ನಿರ್ವಹಣೆ' ಕುರಿತ ಕಾರ್ಯಾಗಾರ

Upayuktha
0


ಮಂಗಳೂರು: ಸೇಂಟ್ ಅಲೋಶಿಯಸ್ ಪರಿಗಣಿತ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ವಿಭಾಗವು ನಗರದ ಸ್ವರ್ಣಪ್ರಾಣ ವೆಲ್‌ಬೀಯಿಂಗ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ 'ಮುಟ್ಟಿನ ನಿರ್ವಹಣೆಯಲ್ಲಿ ಸುಸ್ಥಿರ ಸಬಲೀಕರಣ' ಎಂಬ ಕಾರ್ಯಾಗಾರವನ್ನು ಡೊಂಗರಕೇರಿಯ ಕೆನರಾ ಹೈಸ್ಕೂಲಿನಲ್ಲಿ ವಿದ್ಯಾರ್ಥಿಗಳಿಗಾಗಿ ಇಂದು (ಫೆ.25) ಆಯೋಜಿಸಿತ್ತು.


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಲ್ಪಾ ಶಾಸ್ತ್ರಿ ಅವರು ಭಾಗವಹಿಸಿ, ವಿದ್ಯಾರ್ಥಿನಿಯರು ಮುಟ್ಟಿನ ನಿರ್ವಹಣೆಯಲ್ಲಿ ವಹಿಸಬೇಕಾದ ಕಾಳಜಿಗಳ ಬಗ್ಗೆ ಮಾಹಿತಿ ನೀಡಿದರು. ಪರಿಸರ ಸ್ನೇಹಿಯಾದ ಸ್ವಚ್ಛತಾ ವಿಧಾನಗಳು, ಸ್ಯಾನಿಟರಿ ಪ್ಯಾಡ್‌ಗಳ ಸರಿಯಾದ ನಿರ್ವಹಣೆ ಮತ್ತು ವಿಲೇವಾರಿ ಹಾಗೂ ಮುಟ್ಟಿನ ಕುರಿತು ಸಮಾಜದಲ್ಲಿ ಈಗಲೂ ಇರುವ ಮೈಲಿಗೆಯ ಭಾವನೆಯ ಕುರಿತು ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ 6ನೆ ತರಗತಿಯಿಂದ 9ನೇ ತರಗತಿ ವರೆಗಿನ ಸುಮಾರು 90 ವಿದ್ಯಾರ್ಥಿನಿಯರು ಭಾಗವಹಿಸಿದ್ದರು.


ಸೇಂಟ್ ಅಲೋಶಿಯಸ್ ಪರಿಗಣಿತ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಾದ ತಪಸ್ವಿ ವಚ್ಚಾನಿ ಮತ್ತು ನೇಹಾ ಅವರು ವಿಭಾಗ ಮುಖ್ಯಸ್ಥರಾದ ಶ್ರೀಮತಿ ಭವ್ಯ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದರು.


ಎಂಎಜೆಎಂಸಿ ವಿದ್ಯಾರ್ಥಿನಿಯರಾದ ರೀಮಾ ಕಾರ್ಯಕ್ರಮ ನಿರೂಪಿಸಿದರು, ನೇಹಾ ಸ್ವಾಗತಿಸಿದರು, ತಪಸ್ವಿ ವಚ್ಚಾನಿ ವಂದಿಸಿದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top