ಪುತ್ತೂರು: "ಕೌಶಲ್ಯಗಳನ್ನು ವೃದ್ಧಿಸುವುದು ಈಗಿನ ಕಾಲದಲ್ಲಿ ಬಹಳ ಮುಖ್ಯವಾಗಿದೆ. ಶಿಕ್ಷಣದ ಜೊತೆಗೆ ಕೌಶಲ್ಯವು ಇದ್ದರೆ ಬಹಳಷ್ಟು ಕೆಲಸಗಳು ನಿಮ್ಮನ್ನು ಕೈಬೀಸಿ ಕರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗಾಗಿ ನೀವೆಲ್ಲರೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ" ಎಂದು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಳಚ್ಚಿಲ್, ಮಂಗಳೂರು ಇಲ್ಲಿನ ಎಂಬಿಎ ವಿಭಾಗದ ಪ್ರಾಧ್ಯಾಪಕಿ ಡಾ. ವೀಣಾ ಸಂತೋಷ್ ರೈ ಹೇಳಿದರು.
ಇವರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿ ವಾಣಿಜ್ಯ ವಿಭಾಗ, ಐಕ್ಯೂಎಸಿ ಘಟಕ ಮತ್ತು ಎಂಬಿಎ ವಿಭಾಗ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಳಚ್ಚಿಲ್, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ, ನಿರ್ವಹಣೆ ಮತ್ತು ವಾಣಿಜ್ಯೋದ್ಯಮ ಅಭಿವೃದ್ಧಿ ಚಟುವಟಿಕೆಗಳಿಗೆ ಕೌಶಲ್ಯ ಎನ್ನುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
"ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ಗುರಿ ಇರಬೇಕು. ಆ ಗುರಿಯನ್ನು ತಲುಪಲು ನೀವು ಹಂತ ಹಂತವಾಗಿ ಪ್ರಯತ್ನಿಸಬೇಕು. ಛಲಬಿಡದೆ ಚೆನ್ನಾಗಿ ಕಲಿತ ಸಾಕಷ್ಟು ವಿಧ್ಯಾರ್ಥಿಗಳು ಈಗ ಒಳ್ಳೆಯ ಹುದ್ದೆಯಲ್ಲಿ ಇದ್ದಾರೆ" ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ| ವಿಷ್ಣು ಗಣಪತಿ ಭಟ್ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಳಚ್ಚಿಲ್ ಇಲ್ಲಿನ ಎಂಬಿಎ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳನ್ನು 4 ತಂಡವನ್ನಾಗಿ ಮಾಡಿ, ಕೌಶಲ್ಯ ಅಭಿವೃದ್ಧಿಯ ಚಟುವಟಿಕೆಗಳನ್ನು ಮಾಡಿಸಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ರವಿಕಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ನಾಯಕ್ ವಂದಿಸಿ, ಸಹಾಯಕ ಪ್ರಾಧ್ಯಾಪಕಿ ಅಂಕಿತ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ