ಬಜೆಟ್‌ನಲ್ಲಿ ನವಲಿ ಜಲಾಶಯ ಕುರಿತು ಯಾವುದೇ ಪ್ರಸ್ತಾಪ ಇಲ್ಲ: ಜನಾರ್ದನ ರೆಡ್ಡಿ

Upayuktha
1 minute read
0

 


ಬೆಂಗಳೂರು: ಸದನದಲ್ಲಿ ನವಲಿ ಜಲಾಶಯದ ಕುರಿತು ಮಾತನಾಡಿದ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು "ಈ ವರ್ಷದ ಬಜೆಟ್‌ನಲ್ಲಿ ನವಲಿ ಜಲಾಶಯದ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಯಾವುದೇ ಪ್ರಸ್ತಾಪ ಮಾಡದಿರುವ ವಿಚಾರವನ್ನು ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರಲಾಯಿತು. ಕಳೆದ ಎರಡು ಬಜೆಟ್‌ಗಳಲ್ಲಿ ಮುಖ್ಯಮಂತ್ರಿಗಳು ಈ ಕುರಿತು ಪ್ರಸ್ತಾಪಿಸಿದ್ದು, ಸಾವಿರ ಕೋಟಿ ಅನುದಾನವನ್ನು ಸಹ ಘೋಷಿಸಿದ್ದರು. ಆದರೆ ಈ ಬಾರಿ ಯಾವುದೇ ಪ್ರಸ್ತಾಪ ಮಾಡದೇ ಇರುವುದು ಈ ಭಾಗದ ಜನರ ನಿರಾಶೆಗೆ ಕಾರಣವಾಗಿದೆ ಎಂದು ತಿಳಿಸಿದರು. 


ಆದ್ದರಿಂದ, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿಯಾದ ತುಂಗಭದ್ರಾ ನೀರಿನ ಸಮಸ್ಯೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಮತ್ತು ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಗಂಭೀರವಾಗಿ ಪರಿಗಣಿಸಬೇಕು. ಈ ಸಮಸ್ಯೆಯನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳೊಂದಿಗೆ ಚರ್ಚಿಸಿ, ಆದಷ್ಟು ಬೇಗ ನವಲಿ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
To Top