ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಮಾರೋಪ ಕಾರ್ಯಕ್ರಮ

Upayuktha
0



ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಿದ್ಯಾರಣ್ಯಪುರದ ಅಲಸೂರಮ್ಮ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಪದಾಧಿಕಾರಿಗಳ ಸಹಕಾರದೊಂದಿಗೆ ಮಾರ್ಚ್ 18 ರಿಂದ 21ರ ವರೆಗೆ ನಾಲ್ಕು ದಿನಗಳ ಕಾಲ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊದಲ ಮೂರು ದಿನಗಳು ವಿವಿಧ ಭಜನಾ ಮಂಡಳಿಗಳಿಂದ ಭಜನೆ ಮತ್ತು ಶ್ರೀ ಚಂದ್ರಶೇಖರ ಆಚಾರ್ಯರಿಂದ "ಮಹಾಭಾರತದ ಮಹಾನ್ ಸ್ತ್ರೀಯರು" ವಿಷಯವಾಗಿ ಪ್ರವಚನ ನಡೆಯಿತು.


ನಾಲ್ಕನೇ ದಿನದಂದು   "ಹರಿನಾಮ ಸಂಕೀರ್ತನೆ"  ಕಾರ್ಯಕ್ರಮದಲ್ಲಿ ಕು|| ಪ್ರಣೀತಾ ಟಿ. ಮಣೂರ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಹಾಡಿದರು. ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಅಖಿಲಾ ಮತ್ತು ಮೃದಂಗ ವಾದನದಲ್ಲಿ ಅಜಯ್ ಆದಿತ್ಯ ಸಾಥ್ ನೀಡಿದರು. 


ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದ ಎಲ್ಲಾ ದಿನಗಳಂದೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top