ಬಣ್ಣದೋಕುಳಿಯಲ್ಲಿ ಮಿಂದೆದ್ದ ಜನರು.
ಬಳ್ಳಾರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಜನರು ಸಂಭ್ರಮದಿಂದ ಆಚರಿಸಿದರು. ತಮ್ಮ ಪ್ರದೇಶಗಳಲ್ಲಿ ಗುರುವಾರ ರಾತ್ರಿ ಕಾಮದಹನ ಮಾಡಿ ಸಂಭ್ರಮಿಸಿದರು. ಬೆಳಿಗ್ಗೆ ಮಡಿಕೆ ಒಡೆಯುವ ಮೂಲಕ ಬಣ್ಣದೋಕುಳಿಗೆ ಚಾಲನೆ ನೀಡಲಾಯಿತು. ಸ್ನೇಹಿತರು, ಕುಟುಂಬದ ಸದಸ್ಯರೊಂದಿಗೆ ಒಬ್ಬರಿಗೊಬ್ಬರು ಬಣ್ಣಗಳನ್ನು ಎರಚಿ ಕುಣಿದು ಕುಪ್ಪಳಿಸಿ ಹಬ್ಬವನ್ನು ಸಂಭ್ರಮಿಸಿದರು.
ಹಬ್ಬದ ಸಂಭ್ರಮ: ನಗರದ ಹೃದಯ ಭಾಗ ಸತ್ಯನಾರಾಯಣ ಪೇಟೆ ಬಡಾವಣೆಯ ಕೂಲ್ ಕಾರ್ನರ್ ಬಳಿ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಹೋಳಿ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಗುರುವಾರ ರಾತ್ರಿ ಜಮಾಯಿಸಿದ ನೂರಾರು ಜನರ ಮಧ್ಯೆ ಕಾಮದಹನ ಮಾಡಿ ಸಂಭ್ರಮಿಸಿದರು. ಶುಕ್ರವಾರ ಬೆಳಿಗ್ಗೆ ಮಾಡಿಕೆ ಒಡೆಯುವ ಮೂಲಕ ಬಣ್ಣದೋಕುಳಿ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಉದ್ಯಮಿ ಬಿ.ಕೆ.ಬಿ. ಎನ್ ಮೂರ್ತಿ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಶ್ರೀರಾಮ್, ಪಾಲಿಕೆ ಸದಸ್ಯ ಅಶೋಕ್ ಕುಮಾರ್, ಬುಡಾ ಮಾಜಿ ಅಧ್ಯಕ್ಷ ಮಾರುತಿ ಪ್ರಸಾದ್ ಸರ್ವ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಮಡಿಕೆ ಒಡೆಯುವ ಮೂಲಕ ಬಣ್ಣ ಬಣ್ಣದ ಹಬ್ಬ ಹೋಳಿ ಹಬ್ಬದ ಬಣ್ಣದೋಕುಳಿಗೆ ಚಾಲನೆ ನೀಡಲಾಯಿತು. ನೆರೆದ ಸಾವಿರಾರು ಜನರು ವಿವಿಧ ಹಾಡುಗಳಿಗೆ ಸ್ಟೆಪ್ಸ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದರು.
ಯುವಕರು, ಯುವತಿಯರು, ಮಹಿಳೆಯರು ಒಬ್ಬರಿಗೊಬ್ಬರು ಬಣ್ಣ ಎರಚಿ ಹೋಳಿ ಹಬ್ಬವನ್ನು ಸಂಭ್ರಮಿಸಿದರು. ಅಹಿತಕರ ಘಟನೆಯಾಗದಂತೆ ಪೋಲೀಸ್ ಅಧಿಕಾರಿಗಳು ಸೂಕ್ತ ಭದ್ರತೆ ಕಲ್ಪಿಸಿದ್ದರು. ಯುವಕರ ಗುಂಪೊಂದು ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಹಬ್ಬವನ್ನು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣಪಾಲ್ ಐನಾಥ್ ರೆಡ್ಡಿ, ಹಿಂದೂ ಜಾಗರಣ ವೇದಿಕೆಯ ಭರತ್ ಲಾಲ್ ಸೋನಿ, ಅರ್ಜುನ್ ಭಾಯಿ, ರೈಲ್ವೆ ಕ್ರಿಯಾ ಸಮಿತಿಯ ಮಹೇಶ್ವರ ಸ್ವಾಮಿ, ನಗರ ಘಟಕದ ಅಧ್ಯಕ್ಷ ವೆಂಕಟೇಶ್ವರ, ಶಬರಿ ರವಿ, ರಾಮಚಂದ್ರಪ್ಪ, ಜನತಾ ಬಜಾರ್ ಅಧ್ಯಕ್ಷ ವೇಮಣ್ಣ ಸೇರಿದಂತೆ ಇತರರು ಇದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ