ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಭಾಸಾಪ ಬೆಳ್ತಂಗಡಿ- ಉಪನ್ಯಾಸ ಮಾಲಿಕೆ- 3ನೆ ಅಧ್ಯಾಯ

Upayuktha
0

 


ಬೆಳ್ತಂಗಡಿ: ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೂರನೇ ಅಧ್ಯಾಯವು  ನಡೆಯಿತು. ಸಮಿತಿಯ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದರು.

   

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಡ್ವೊಕೇಟ್ ಮುರಳಿ ಬಲಿಪ ಇವರಿಗೆ  ರವೀಂದ್ರ ಶೆಟ್ಟಿ ಬಳಂಜ ಇವರು ಮತ್ತು ಸಂಪನ್ಮೂಲ ವ್ಯಕ್ತಿ ಡಾ. ಪ್ರದೀಪ್ ಆಟಿಕುಕ್ಕೆ ಇವರನ್ನು ರಮೇಶ್ ಮಯ್ಯ ಇವರು ತಾಂಬೂಲ ನೀಡಿ ಗೌರವಿಸಿದರು. ಅತಿಥಿಗಳು ಶಾರದ ಮಾತೆ ಮತ್ತು ಭಾರತ ಮಾತೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಗೈದರು.


ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷೆ  ಇಂದುಮತಿ ಶಾರದೆಯನ್ನು ಸ್ತುತಿಸಿದರು. ಕಾರ್ಯದರ್ಶಿ  ಸುಭಾಷಿಣಿಯವರ ರಚನೆಯ  ಆಶಯ ಗೀತೆಯನ್ನು  ಅಶ್ವಿಜ ಶ್ರೀಧರ್ ಇವರು ರಾಗ ಸಂಯೋಜಿಸಿ ಸುಶ್ರಾವ್ಯವಾಗಿ ಹಾಡಿದರು.


ಡಾ. ಪ್ರದೀಪ್ ಆಟಿಕುಕ್ಕೆ  ಇವರು ಭಗವದ್ಗೀತೆಯ ಮೂರನೇ ಅಧ್ಯಾಯದ ಉಪನ್ಯಾಸ ಮಾಲಿಕೆಯ ಮಹಾಭಾರತದ ಯುದ್ಧದ ಸಂದರ್ಭದಲ್ಲಿ ಕೃಷ್ಣನ ತತ್ವ ಚಿಂತನೆಯ ಉಪದೇಶ ಕೇಳಿದ ಅರ್ಜುನನಿಗೆ ಕರ್ಮಕ್ಕಿಂತ ಜ್ಞಾನವೇ ಶ್ರೇಷ್ಠ ಎನ್ನುವ ಯೋಚನೆ ಬಂದಾಗ ಕೃಷ್ಣನು ಉತ್ತರಿಸುತ್ತಾ.. ಕರ್ಮವನ್ನು ಪ್ರಕೃತಿ ಸಹಜವಾಗಿ ಎಲ್ಲರೂ ಮಾಡಲೇಬೇಕು. 


ಶ್ರದ್ಧೆಯಿಂದ ಮಾಡುವ ಕೆಲಸವೇ ಕರ್ಮಯೋಗವಾಗುತ್ತದೆ ಮತ್ತು ಪ್ರತಿಯೊಂದು ಕೆಲಸದ ಹಿನ್ನೆಲೆಯಲ್ಲೂ ಫಲತ್ಯಾಗವನ್ನು ಮಾಡುವುದೇ ನಿಜವಾದ  ಜ್ಞಾನವಾಗುತ್ತದೆ. ಆದ್ದರಿಂದ ಕರ್ಮಯೋಗ ಮತ್ತು ಜ್ಞಾನಯೋಗ ಒಂದೇ ನಾಣ್ಯದ ಎರಡು ಮುಖ ಇದ್ದ ಹಾಗೆ. ನಮ್ಮ ನಮ್ಮ ಗುಣಕ್ಕೆ ಅನುಗುಣವಾಗಿ ನಮ್ಮ ಕೆಲಸಗಳಾಗಿರುತ್ತವೆ. ಫಲದ ನಿರೀಕ್ಷೆ ಇಲ್ಲದೆ ಕರ್ಮವನ್ನು ಮಾಡುವುದೇ ಕರ್ಮ ಶುದ್ಧಿಯಾಗಿದೆ ಎಂದು ಗೀತೆಯ ಸ್ವಾರಸ್ಯವನ್ನು, ವಿವಿಧ ಉದಾಹರಣೆಗಳ ಮೂಲಕ ಮನೋಜ್ಞವಾಗಿ  ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಡ್ವೊಕೇಟ್ ಮುರಳಿ ಬಲಿಪ  ಇವರು,  ಯಾರು ತನಗೋಸ್ಕರ ಕರ್ಮವನ್ನು ಮಾಡುವನೋ ಅವನು ಯಾರ ಮನಸ್ಸಲ್ಲೂ ಉಳಿಯಲಾರ, ಅದೇ ಯಾರು ಇತರರಿಗಾಗಿ ಕೆಲಸ ಮಾಡುವನೋ ಅವನನ್ನು ಜಗತ್ತು ನೆನಪಿಸಿಕೊಳ್ಳುತ್ತದೆ. ಮಾತ್ರವಲ್ಲ ಶ್ರದ್ಧೆಯಿಂದ ಮಾಡುವ ಕೆಲಸ ಯಶಸ್ಸನ್ನು ತರುತ್ತದೆ ಎನ್ನುವುದನ್ನು ಕಥೆಗಳ ಮೂಲಕ ವಿವರಿಸಿದರು.


ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿದ  ಈ ಕಾರ್ಯಕ್ರಮ ಅನುಕರಣೀಯ ಎಂದು ನುಡಿದು ಶುಭ ಹಾರೈಸಿದರು. ಇವರಿಗೆ  ಅಶ್ವಿನಿ ಹೆಬ್ಬಾರ್ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ. ಪ್ರದೀಪ್ ಆಟಿಕುಕ್ಕೆ ಇವರಿಗೆ  ಜಯಂತಿ ಶೆಟ್ಟಿ ಇವರು ಪುಸ್ತಕ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.  ಜತೆ ಕಾರ್ಯದರ್ಶಿ   ಸಂತೋಷಿಣಿ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಸಮಿತಿಯ ಕಾರ್ಯದರ್ಶಿ  ಸುಭಾಷಿಣಿ  ಸರ್ವರಿಗೂ ಧನ್ಯವಾದವನ್ನಿತ್ತರು.


ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಪ್ರಕಾರ ಪ್ರಮುಖರುಮತ್ತು ಸದಸ್ಯರು, ನಮ್ಮ ಮನೆ ಹವ್ಯಕ ಭವನ ಕ್ರಿಯಾ ಸಮಿತಿಯ ಸದಸ್ಯರು,  ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸದಸ್ಯರು, ಸ್ಥಳೀಯ ಭಜನಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವೇದವ್ಯಾಸ ಶಿಶುಮಂದಿರದ ಪದಾಧಿಕಾರಿಗಳು, ಹಾಗೂ ಊರಿನ ಮಹನೀಯರು ಮತ್ತು ಮಹಿಳೆಯರು, ವಿದ್ಯಾರ್ಥಿಗಳು  ಉಪಸ್ಥಿತರಿದ್ದು ದ್ವಿತೀಯ ಅಧ್ಯಾಯದ ಪ್ರಯೋಜನವನ್ನು ಪಡೆದುಕೊಂಡರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top