ದಾವಣಗೆರೆ: ಶ್ರೀ ಗಾಯತ್ರಿ ಪೂಜೆ, ಉಪಾಸನೆ ಯಶಸ್ವೀ ಸಂಪನ್ನ

Upayuktha
0



ದಾವಣಗೆರೆ: ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಗಾಯತ್ರಿ ಪೂಜೆ ಉಪಾಸನೆ ಹೋಳಿ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಸುಸಂಪನ್ನಗೊಂಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.


ಪರಿವಾರದ ಖಜಾಂಚಿ ಪುರುಷೋತ್ತಮ ಬೈ ಪಟೇಲ್ ಕುಟುಂಬದ ಈ ತಿಂಗಳ ಪೂಜಾ ಸೇವೆಯಲ್ಲಿ ಪರಿವಾರದ ಗೌರವ ಅಧ್ಯಕ್ಷ ಕೆ.ಹೆಚ್. ಮಂಜುನಾಥ್,  ಸಂಚಾಲಕ ಭಾವನ್ನಾರಾಯಣ, ವಿಕ್ರಂಜೈನ್, ಸತೀಶ್ ಆರ್.ಎಂ., ವಿ.ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top