ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗಸಿರಿ ಕೃತಿ ಬಿಡುಗಡೆ ಮಾಡಲಾಯಿತು.
ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಕೃತಿ ಲೋಕಾರ್ಪಣೆ ಮಾಡಿದರು. ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ ಕೃತಿಗಳ ವಿಮರ್ಶೆ ಮಾಡಿ ಪತ್ರಿಕೆಗಳಲ್ಲಿ ಪ್ರಕಟಿಸಿ ಪ್ರೋತ್ಸಾಹಿಸಿದ್ದಾರೆ. ರಂಗಭೂಮಿ ಯಲ್ಲೂ ಸಾಕಷ್ಟು ಕ್ರಿಯಶೀಲರಾಗಿ ರಂಗದ ಮೇಲೆ ಪ್ರದರ್ಶಿತ ನಾಟಕಗಳನ್ನು ನೋಡಿ ವಿಮರ್ಶೆಯನ್ನು ಮಾಡಿ ರಂಗಭೂಮಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನನ್ನ ಒಂದು ಮಿನಿ ಕಾದಂಬರಿ ಸುಡುಗಾಡು ಕಥೆಯನ್ನು ನಾಟಕವಾಗಿ ರೂಪಾಂತರಿಸಿದ್ದಾರೆ. ಇದನ್ನು ರಂಗದ ಮೇಲೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.
ಇದೇ ವೇದಿಕೆಯಲ್ಲಿ ಆನಂದ ಕುಮಾರ್ ಜಿ. ವಿ. ಯಾದವ್ ಅವರ ಭಾವದ ಬೆಳಕು, ಕವನ ಸಂಕಲನ, ನಾಗರಾಜ ಟಿ.ವಿ. ಅವರ ಕವನ ಸಂಕಲನ ಮೂಕ ಸಾಕ್ಷಿಗಳು, ವೆಂಕಣ್ಣ ಮಾಳೆಕೊಪ್ಪ ಅವರ ಧರಣಿ ಕವನ ಸಂಕಲನ, ಹಾಲೇಶ್ ಹಕ್ಕಂಡಿ ಅವರ ಅಂಬರ ಮಣಿಯ ಶೃಂಗಾರ ಕವನ ಸಂಕಲನ ಮತ್ತು ಪ್ರಮೀಳಾ ಪಾಟೀಲ ಎಸ್ ಬಿಬ್ಬಳ್ಳಿ ಅವರ ಬೆಳದಿಂಗಳು ಕವನ ಸ೦ಕಲನ ಲೋಕಾರ್ಪಣೆಗೊಂಡವು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ