ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ಶಾಸಕ ಕಾಮತ್

Upayuktha
0


ಬೆಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು ಹತ್ತು ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶನದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.


ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top