ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡುವ ಉದ್ದೇಶ
ಹಿಂದೂ ಇಕೋಸಿಸ್ಟಮ್ ನಿರ್ಮಾಣ ಮಾಡಲು 1000 ಕ್ಕೂ ಹೆಚ್ಚು ಹಿಂದುತ್ವವಾದಿಗಳ ಸಹಯೋಗ
ಮಂಗಳೂರು: ದೇಶದಲ್ಲಿ ಹಿಂದು ಇಕೋಸಿಸ್ಟಮ್ ನಿರ್ಮಿಸಲು ಚಿಂತನೆ ಮತ್ತು ಕಾರ್ಯಯೋಜನೆ ರೂಪಿಸಲು ಹಿಂದೂ ಜನಜಾಗೃತಿ ಸಮಿತಿಯು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾರ್ಚ್ 16 ರಂದು ಬೆಳಿಗ್ಗೆ 10 ರಿಂದ ಪ್ರಾಂತೀಯ ಹಿಂದು ರಾಷ್ಟ್ರ ಅಧಿವೇಶನವನ್ನು ಆಯೋಜಿಸಿದೆ. ಈ ಅಧಿವೇಶನದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ 100 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ 2500 ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.
ಈ ಅಧಿವೇಶನದಲ್ಲಿ ಮುಖ್ಯವಾಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಹಿರಿಯ ವಕೀಲ ಅರುಣ ಶ್ಯಾಮ್, ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಸನಾತನ ಸಂಸ್ಥೆಯ ಧರ್ಮಪ್ರಸಾರಕ ಸಂತರಾದ ಪೂಜ್ಯ ರಮಾನಂದ ಗೌಡ ಸೇರಿದಂತೆ ನೂರಾರು ವಕೀಲರು, ವೈದ್ಯರು, ಉದ್ಯಮಿಗಳು, ಚಿಂತಕರು, ಲೇಖಕರು, ದೇವಸ್ಥಾನಗಳ ವಿಶ್ವಸ್ಥರು ಮತ್ತು ನೂರಾರು ಹಿಂದೂ ಸಕ್ರಿಯ ಕಾರ್ಯಕರ್ತರು, ವಿವಿಧ ಆಧ್ಯಾತ್ಮಿಕ, ಧಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ. ಈ ಅಧಿವೇಶನದಲ್ಲಿ ಭಾಗವಹಿಸಲು ಇಚ್ಛಿಸುವವರು ಈ 7204082652 ನಂಬರ್ ಗೆ ಸಂಪರ್ಕ ಮಾಡಬಹುದು.
ಹಿಂದೂ ಜನಜಾಗೃತಿ ಸಮಿತಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಉದ್ಯಮಿಗಳಾದ ಎಂ.ಜೆ ಶೆಟ್ಟಿ, ನ್ಯಾಯವಾದಿ ಈಶ್ವರ ಕೊಟ್ಟಾರಿ, ಹಿಂದೂ ಯುವ ಸೇನೆಯ ಅಧ್ಯಕ್ಷ ಕಿರಣ ರೈ, ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ಚಂದ್ರ ಮೊಗವೀರ್, ಹಿಂದೂ ಜನ ಜಾಗೃತಿ ಸಮಿತಿಯ ವಕ್ತಾರ ಮೋಹನ್ ಗೌಡ ಇವರು ಉಪಸ್ಥಿತರಿದ್ದರು.
ವಕ್ಫ್ ಬೋರ್ಡ್ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಕರ್ನಾಟಕ ಸರಕಾರವು ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ ನೀಡಿದೆ. ಈ ವರ್ಷದ ಶಿವರಾತ್ರಿ, ಗಣೇಶ ಚತುರ್ಥಿಯ ವಿಸರ್ಜನೆಯ ಸಂದರ್ಭದಲ್ಲಿ ಮತ್ತು ದೀಪಾವಳಿ ಹಬ್ಬದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ, ಮಾರಣಾಂತಿಕ ಹಲ್ಲೆ ಮಾಡಲಾಯಿತು.
ಲವ್ ಜಿಹಾದ್, ಹಲಾಲ್ ಜಿಹಾದ್ ಮಿತಿಮೀರಿ ನಡೆಯುತ್ತಿದೆ, ರಾಜ್ಯದ ಪಠ್ಯ ಇತಿಹಾಸದಲ್ಲಿ ಹಿಂದುಗಳ ಇತಿಹಾಸವನ್ನು ತಿರುಚಲಾಗುತ್ತಿದೆ. ಮಣಿಪುರ, ಮಿಜೋರಾಮ್ಗಳನ್ನು ಪ್ರತ್ಯೇಕ ಕ್ರೈಸ್ತ ದೇಶವಾಗಿ ಸ್ಥಾಪಿಸುವ ಕುತಂತ್ರ ಹಾಗೂ ವಿಭಜನೆಯ ಸಂಕೇತ ಇದಾಗಿದೆ. ಭಾರತದ ಅಖಂಡತೆಯನ್ನು ಕಾಪಾಡಲು ಹಿಂದು ರಾಷ್ಟ್ರ ಅಗತ್ಯವಾಗಿದೆ ಎಂದು ಮುಖಂಡರು ತಿಳಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ