ನಿಟ್ಟೆ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ ಐಸಿಎಐ ಜನವರಿ 2025 ರಲ್ಲಿ ನಡೆಸಿದ ಸಿ.ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2021-24 ನೇ ಸಾಲಿನ ಬಿಕಾಂ ವಿದ್ಯಾರ್ಥಿ ಅದಿತ್ ತೇರ್ಗಡೆಯಾಗಿರುತ್ತಾರೆ. ಇವರು ಹಾಳೆಕಟ್ಟೆಯ ಅಕ್ಷತಾ ಸಾಲಿಯಾನ್ ಮತ್ತು ಪ್ರದೀಪ್ ಸಾಲಿಯಾನ್ ಅವರ ಸುಪುತ್ರ.
ಕಾಲೇಜು ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ವೀಣಾ ಕುಮಾರಿ ಬಿ.ಕೆ, ಕಾಲೇಜಿನ ಅಧ್ಯಾಪಕ, ಅಧ್ಯಾಪಕೆತರ ಬಳಗ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿರುವರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ