ಪೆರಿಗೇರಿ ಧರ್ಮ ಶಿಕ್ಷಣ ಸಮಿತಿ ಪದಾಧಿಕಾರಿಗಳ ಆಯ್ಕೆ

Upayuktha
0



ಪುತ್ತೂರು: ಪುತ್ತೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಧರ್ಮ ಶಿಕ್ಷಣ ತರಗತಿಗಳನ್ನು ಆರಂಭಿಸುವ ಹಿನ್ನೆಲೆಯಲ್ಲಿ ಅನೇಕ ಗ್ರಾಮಗಳಲ್ಲಿ ಧರ್ಮಶಿಕ್ಷಣ ಸಮಿತಿಗಳು ಅಸ್ತಿತ್ವಕ್ಕೆ ಬರುತ್ತಿದ್ದು, ಪೆರಿಗೇರಿಯಲ್ಲಿ ರೂಪು ತಳೆದ ಧರ್ಮ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿ ಪವನ್ ಕುಮಾರ್, ಕಾರ್ಯದರ್ಶಿಯಾಗಿ ಯಶ್ವಿತ್ ಪೆರಿಗೇರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್, ಉಪಾಧ್ಯಕ್ಷರಾಗಿ ರಾಜು ಪೆರಿಗೇರಿ, ಕೋಶಾಧಿಕಾರಿಯಾಗಿ ಗಣೇಶ್ ಆಚಾರ್ಯ ಸಲಹೆಗಾರರಾಗಿ ಶಂಕರಿ ಹಾಗೂ ಸದಸ್ಯರಾಗಿ ಶೈಲಾ ಡಿ., ಶ್ರೀನಿವಾಸ ಕನ್ನಯ ಹಾಗೂ ಸುಬ್ಬಣ್ಣ ರೈ ಅವರು ಆಯ್ಕೆಯಾಗಿದ್ದಾರೆ. 


ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ಉಪಸ್ಥಿತರಿದ್ದರು.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top