ಶಿವಮೊಗ್ಗ : ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಡಶಾಲೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ವತಿಯಿಂದ ನಡೆದ ಸರಸ್ವತಿ ಪೂಜಾ ಕಾರ್ಯಕ್ರಮದ ಅಂಗವಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಪರೀಕ್ಷೆ ಭಯವನ್ನು ಎದುರಿಸುವುದು ಹೇಗೆ" ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಪ್ತಸಮಾಲೋಚಕರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಯುತ ಮಂಜುನಾಥ್ ಸ್ವಾಮಿಯವರು ಮಾತನಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯವನ್ನು ಮತ್ತು ಒತ್ತಡವನ್ನು ಹೇಗೆ ಕಡಿಮೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿದರು.
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆತಂಕದ ಸಮಸ್ಯೆಯನ್ನು ಅನುಭವಿಸುತ್ತಿದ್ದು ಒತ್ತಡ ನಿರ್ವಹಣೆ ಮಾಡಿಕೊಳ್ಳುವಲ್ಲಿ ಸೋಲುತ್ತಿದ್ದಾರೆ. ಮೊಬೈಲ್ ಚಟವು ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿದ್ದು ಅದನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಪರೀಕ್ಷೆ ಪೂರ್ವ ಸಿದ್ದತೆಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿಯವರು ಮಾತನಾಡಿ "ಹದಿಹರೆಯದ ಮನಸ್ಸಗಳು ಬಹಳ ಸೂಕ್ಷ್ಮವಾಗಿದ್ದು ಗೊಂದಲಮಯವಾಗಿರುತ್ತದೆ ಹಾಗೂ ಸಾಕಷ್ಟು ಬೇಡದ ವಿಷಯಗಳು ತುಂಬಿಕೊಂಡು ಕಲುಷಿತವಾಗಿರುತ್ತದೆ. ಇವುಗಳನ್ನು ಶಿಸ್ತು, ಸಂಯಮ ಮತ್ತು ತಾಳ್ಮೆಯಿಂದ ಸಂಸ್ಕರಿಸಿ ಶುದ್ದವಾಗಿಸಿ ನಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು" ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ಹಿರಿಯಣ್ಣ ಹೆಗಡೆ, ಕೋಳಿಗೆ ವಾಸಪ್ಪ ಗೌಡ, ಹಾಗೂ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಖೆಗಳ ಪ್ರಾಂಶುಪಾಲರಾದ ದಿವ್ಯ ಕರಣಂ, ಗೀರಿಶ್, ಸುರೇಶ್, ರಮೇಶ್, ಎಸ್.ವಿ.ಗುರುರಾಜ್ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರು ಹಾಗೂ 300 ಕ್ಕೂ ಹೆಚ್ಚು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ