ಬ್ರಹ್ಮಧ್ವಜದ ಮೇಲಿನ ತಾಮ್ರದ ಕಲಶದ ಮಹತ್ವ

Upayuktha
0

ಯುಗಾದಿ ಹಬ್ಬದ ನಿಮಿತ್ತ  ವಿಶೇಷ ಲೇಖನ



ಬ್ರಹ್ಮಧ್ವಜದ ಮೇಲೆ ತಾಮ್ರದ ಕಲಶವನ್ನು ಮಗುಚಿ ಹಾಕುತ್ತಾರೆ. ಸದ್ಯ ಕೆಲವು ಜನರು ಸ್ಟೀಲಿನ ಅಥವಾ ತಾಮ್ರದ ಲೋಟ ಅಥವಾ ಮಡಿಕೆಯ ಆಕಾರದಂತಹ ಪಾತ್ರೆಗಳನ್ನು ಬ್ರಹ್ಮಧ್ವಜದ ಮೇಲಿಡುವುದು ಕಂಡುಬರುತ್ತದೆ. ‘ತಾಮ್ರದ ಕಲಶವನ್ನು ಬ್ರಹ್ಮಧ್ವಜದ ಮೇಲೆ ಮಗುಚಿ ಹಾಕಬೇಕು’ ಎಂದು ಧರ್ಮಶಾಸ್ತ್ರವು ಏಕೆ ಹೇಳುತ್ತದೆ, ಎಂಬುದನ್ನು ತಿಳಿದುಕೊಳ್ಳಲು ಅದರ ಹಿಂದಿರುವ ಅಧ್ಯಾತ್ಮಶಾಸ್ತ್ರದ ವಿವೇಚನೆ ಈ ಲೇಖನದಲ್ಲಿದೆ. ಇದರಿಂದ ನಮ್ಮ ಸಂಸ್ಕೃತಿಯ ಶ್ರೇಷ್ಠತೆ ಹಾಗೂ ಪ್ರತಿಯೊಂದು ಕೃತಿಯನ್ನು ಧರ್ಮಶಾಸ್ತ್ರಕ್ಕನುಸಾರ ಏಕೆ ಮಾಡಬೇಕು ಎಂಬುದು ಗಮನಕ್ಕೆ ಬರಬಹುದು .


ಬ್ರಹ್ಮಧ್ವಜದ ಮೇಲಿನ ಕಲಶವನ್ನು ಏಕೆ ಮಗುಚಿಡುತ್ತಾರೆ ?

ಕಲಶದ ಮುಖವನ್ನು ಭೂಮಿಯ ಕಡೆಗೆ ಇಡುವುದರಿಂದ ತಾಮ್ರದ ಕಲಶದ ಟೊಳ್ಳಿನಿಂದ ಪ್ರಕ್ಷೇಪಿತಗೊಳ್ಳುವ ಲಹರಿಗಳಿಂದಾಗಿ ಕಲಶದಲ್ಲಿರುವ ಬೇವಿನ ಎಲೆ ಮತ್ತು ರೇಷ್ಮೆವಸ್ತ್ರಗಳು ಸಾತ್ತ್ವಿಕ ಲಹರಿಗಳಿಂದ ಭರಿತಗೊಳ್ಳುತ್ತವೆ. ಭೂಮಿಯ ಆಕರ್ಷಣಾಶಕ್ತಿಯಿಂದಾಗಿ ಈ ಪರಿವರ್ತನೆಯಾದ ಸಗುಣ ಶಕ್ತಿಯ ಪ್ರವಾಹವು ಭೂಮಿಯ ದಿಶೆಯತ್ತ ಸಂಕ್ರಮಿತಗೊಳ್ಳಲು ಮತ್ತು ಅದರಿಂದ ಭೂಮಿಯ ಮೇಲೆ ಸೂಕ್ಷ್ಮ-ಆಚ್ಛಾದನೆಯಾಗಲು ಸಹಾಯವಾಗುತ್ತದೆ. 


ಕಲಶವನ್ನು ಮಗುಚಿಡದೇ ನೆಟ್ಟಗೆ ಇಟ್ಟರೆ, ಸಂಪೂರ್ಣವಾಗಿ ಊರ್ಧ್ವ ದಿಕ್ಕಿನತ್ತ ಲಹರಿಗಳು ಪ್ರಕ್ಷೇಪಿತಗೊಳ್ಳುವುದರಿಂದ ಭೂಮಿಯ ಸಮೀಪದಲ್ಲಿನ ಕನಿಷ್ಠ ಹಾಗೂ ಮಧ್ಯಮ ಸ್ತರದ ಶುದ್ಧೀಕರಣವಾಗದಿರುವುದರಿಂದ ವಾಯುಮಂಡಲದಲ್ಲಿನ ಕೇವಲ ನಿರ್ದಿಷ್ಠ ಊರ್ಧ್ವ ಪಟ್ಟಿಯ ಶುದ್ಧೀಕರಣವಾಗಲು ಸಹಾಯವಾಗುತ್ತದೆ. ತದ್ವಿರುದ್ಧ ತಾಮ್ರದ ಕಲಶದ ಮುಖವನ್ನು ಭೂಮಿಯ ಕಡೆಗೆ ಮಗುಚಿಟ್ಟರೆ ಅದರಿಂದ ಭೂಮಿಯ ಸಮೀಪದ ಮತ್ತು ಮಧ್ಯಮ ಪಟ್ಟಿಯ ವಾಯುಮಂಡಲಕ್ಕೆ, ಅದರ ಜೊತೆಗೆ ಊರ್ಧ್ವಮಂಡಲಕ್ಕೆ ಈ ಲಹರಿಗಳ ಲಾಭವಾಗಲು ಸಹಾಯವಾಗುತ್ತದೆ.


ಕಹಿಬೇವಿನ ಎಲೆ, ಕಲಶ ಮತ್ತು ರೇಷ್ಮೆವಸ್ತ್ರ ಈ ಮೂರರಿಂದ ನಿರ್ಮಾಣವಾಗುವ ಲಹರಿಗಳಿಂದ ವಾಯುಮಂಡಲವು ಶುದ್ಧವಾಗುವುದು.

ಕಹಿ ಬೇವಿನ ಎಲೆಗಳಿಂದ ಪ್ರಕ್ಷೇಪಿತವಾಗುವ ಶಿವ-ಶಕ್ತಿಗಳಿಗೆ ಸಂಬಂಧಿಸಿದ ಕಾರ್ಯನಿರತ ರಜೋಗುಣಿ ಲಹರಿಗಳಿಂದಾಗಿ ಅಷ್ಟದಿಕ್ಕುಗಳ ವಾಯುಮಂಡಲ ಮತ್ತು ತಾಮ್ರದ ಕಲಶದಿಂದ ಪ್ರಕ್ಷೇಪಿತವಾಗುವ ಲಹರಿಗಳಿಂದಾಗಿ ಊರ್ಧ್ವದಿಶೆಯ ವಾಯುಮಂಡಲ ಮತ್ತು ರೇಷ್ಮೆ ವಸ್ತ್ರದಿಂದ ಪ್ರಕ್ಷೇಪಿತವಾಗುವ ಲಹರಿಗಳಿಂದ ಅಧೋದಿಕ್ಕಿನ ವಾಯುಮಂಡಲ ಶುದ್ಧ ಮತ್ತು ಚೈತನ್ಯಮಯವಾಗಲು ಸಹಾಯವಾಗುತ್ತದೆ. 


ಬ್ರಹ್ಮಧ್ವಜದೊಳಗಿನ ಘಟಕಗಳಿಗೆ ದೇವತ್ವವು ಪ್ರಾಪ್ತಿಯಾಗಿದ್ದರಿಂದ ತಾಮ್ರದ ಕಲಶದ ಟೊಳ್ಳಿನಲ್ಲಿ ಘನೀಕೃತವಾದ ನಾದಲಹರಿಗಳು ಕಾರ್ಯನಿರತವಾಗುತ್ತವೆ. ಈ ನಾದಲಹರಿಯಲ್ಲಿ ವಾಯು ಮತ್ತು ಆಕಾಶ ಈ ಎರಡು ಉಚ್ಚ ತತ್ತ್ವಗಳು ಸಮಾವೇಶಗೊಂಡಿದ್ದರಿಂದ ಲಹರಿಗಳ ಪ್ರಕ್ಷೇಪಣೆಯಿಂದಾಗಿ ಊರ್ಧ್ವ ದಿಶೆಯ ವಾಯುಮಂಡಲವು ಶುದ್ಧವಾಗುತ್ತದೆ.


ಕಲಶದ ಮೇಲೆ ಸ್ವಸ್ತಿಕವನ್ನು ಏಕೆ ಬಿಡಿಸುತ್ತಾರೆ ? ಸ್ವಸ್ತಿಕ ಇದು ಶುಭಚಿಹ್ನೆಯಾಗಿದೆ. ಸ್ವಸ್ತಿಕದಿಂದ ಸಾತ್ತ್ವ್ವಿಕ ಸ್ಪಂದನಗಳು ಹೊರ ಬೀಳುತ್ತವೆ ಮತ್ತು ಅದರಲ್ಲಿನ ಚೈತನ್ಯದಿಂದಾಗಿ ವಾತಾವರಣದಲ್ಲಿನ ಕಪ್ಪು ಆವರಣವು ದೂರವಾಗಲು ಸಹಾಯವಾಗುತ್ತದೆ. ಆದುದರಿಂದ ಕಲಶದ ಮೇಲೆ ಕುಂಕುಮದಿಂದ ಸ್ವಸ್ತಿಕವನ್ನು ಬಿಡಿಸಬೇಕು.


- ವಿನೋದ್ ಕಾಮತ್,

ವಕ್ತಾರರು, ಸನಾತನ ಸಂಸ್ಥೆ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top