ಸುಳ್ಯ: ವೈದ್ಯಕೀಯ ,ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆ ಹಾಗೂ ಕೊಡುಗೆಗಾಗಿ ಇತ್ತೀಚಿಗೆ ಚಂದ್ರಶೇಖರ ದಾಮ್ಲೆ ಅವರ ಸುಳ್ಯದ ಸ್ನೇಹಾಲಯ ಶಾಲೆಯಲ್ಲಿ ಡಾ ಮುರಲೀ ಮೋಹನ್ ಚೂಂತಾರು ಮತ್ತು ಡಾ ರಾಜಶ್ರೀ ಮೋಹನ್ ಅವರನ್ನು ಶಾಲು ಹೊದಿಸಿ ಫಲ ಪುಷ್ಪ ಫಲಕ ನೀಡಿ ಸನ್ಮಾನ ಮಾಡಲಾಯಿತು.
ಪದ್ಮಶ್ರೀ ಗಿರೀಶ್ ಭಾರದ್ವಾಜ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಾ ಚಂದ್ರಶೇಖರ ದಾಮ್ಲೆ, ಡಾ ವಿದ್ಯಾಶಾಂಭವ ಪಾರೆ,ಜಯಲಕ್ಷ್ಮಿ ದಾಮ್ಲೆ,ಅಕ್ಷರ ದಾಮ್ಲೆ,ನಿವ್ರತ್ತ ವೈದ್ಯಾಧಿಕಾರಿ ಡಾ ರಂಗಯ್ಯ,ಡಾ ಸುಶ್ಮಿತಾ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ