ಸುರತ್ಕಲ್: ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಎ. ವಿದ್ಯಾರ್ಥಿನಿ ಧನುಶ್ರೀರವರು ಕುಂ. ವೀರಭದ್ರಪ್ಪ ಬರೆದ ಚಾಪ್ಲಿನ್ (ಜೀವನ ಮತ್ತು ಸಾಧನೆ) ಎಂಬ ಪುಸ್ತಕವನ್ನು ಪರಿಚಯಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ ಇವರು ಧನುಶ್ರೀ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಆಶಾಲತಾ ಪಿ, ಪ್ರಾಧ್ಯಾಪಕರುಗಳಾದ ಡಾ.ಸುಧಾ ಯು, ಡಾ. ವಿಜಯಲಕ್ಷ್ಮಿ, ಡಾ. ಸಂತೋಷ್ ಆಳ್ವ, ಕಿಟ್ಟು, ಹಾಗೂ ಗ್ರಂಥಪಾಲಕಿ ಡಾ.ಸುಜಾತಾ ಬಿ, ಉಪಸ್ಥಿತರಿದ್ದರು. ತೃತೀಯ ಬಿ.ಎ ವಿದ್ಯಾರ್ಥಿನಿ ಮೇಘ ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ