ಅವೈಜ್ಞಾನಿಕ ಜಾತಿ ಸಮೀಕ್ಷೆ ಹಾಗೂ ಸಿ.ಇ‌.ಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಅಪಮಾನ: ಹವ್ಯಕ ಮಹಾಸಭಾ ಖಂಡನೆ

Upayuktha
0






ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯ ಕುರಿತಾಗಿ ಕಳೆದ ಎರಡು ದಿನಗಳಿಂದ ಮಾಧ್ಯಮಗಳಲ್ಲಿ ಹಲವಾರು ವರದಿಗಳು ಪ್ರಕಟವಾಗುತ್ತಿದ್ದು, ವರದಿಯ ಪ್ರಕಾರ ಹವ್ಯಕ ಬ್ರಾಹ್ಮಣರ ಜನಸಂಖ್ಯೆ ಕೇವಲ 85 ಸಾವಿರ ಎಂದು ಮಾಧ್ಯಮಗಳ ಮೂಲಕ ಮಹಾಸಭೆಯ ಗಮನಕ್ಕೆ ಬಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದ್ದು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಅಖಿಲ ಹವ್ಯಕ ಮಹಾಸಭೆಯು ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ.

ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಅವರು ಪ್ರಕಟಣೆ ನೀಡಿ, ಜಾತಿ ಸಮೀಕ್ಷೆ ವರದಿಯನ್ನು ತಿರಸ್ಕರಿಸಲು ಆಗ್ರಹಿಸಿದ್ದಾರೆ.

ಹವ್ಯಕ ಬ್ರಾಹ್ಮಣರು ರಾಜ್ಯದ ಉತ್ತರಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಪ್ರಬಲ ಸಮಾಜವಾಗಿದೆ. ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ಆಯೋಜಿತವಾಗಿದ್ದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದನ್ನೂ ನಾವು ಗಮನಿಸಬಹುದಾಗಿದ್ದು, ಹವ್ಯಕ ಸಮಾಜದ ಜನಸಂಖ್ಯೆ ಸುಮಾರು 5 ಲಕ್ಷಕ್ಕೂ ಅಧಿಕವಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಯ ನ್ನು ಖಂಡಿಸುತ್ತಾ, ಅವೈಜ್ಞಾನಿಕ ಸಮೀಕ್ಷೆಯನ್ನು ತಿರಸ್ಕರಿಸುವಂತೆ ಹವ್ಯಕ ಮಹಾಸಭೆ ತೀವ್ರವಾಗಿ ಆಗ್ರಹಿಸುತ್ತದೆ.


ಸಿ.ಇ.ಟಿ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ತುಂಡರಿಸಿ ಅಪಮಾನ :

ಶಿವಮೊಗ್ಗ, ಬೀದರ್ ಸೇರಿದಂತೆ ಕೆಲವಾರು ಸಿ.ಇ.ಟಿ ಪರೀಕ್ಷಾ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ. 


ಬ್ರಹ್ಮೋಪದೇಶದ ಸಮಯದಲ್ಲಿ ಜನಿವಾರವನ್ನು ಧರಿಸಿ; ಗಾಯತ್ರೀ ಮಂತ್ರೋಪದೇಶವನ್ನು ಪಡೆಯುವುದು ಬ್ರಾಹ್ಮಣ ಹಕ್ಕು ಹಾಗೂ ಕರ್ತವ್ಯವಾಗಿದೆ. ಜನಿವಾರಕ್ಕೆ ಧಾರ್ಮಿಕ ಮಹತ್ವವಿದ್ದು, ಪರಮಪವಿತ್ರವಾದ ಜನಿವಾರವನ್ನು ಸಿ.ಇ.ಟಿ ಕೇಂದ್ರಗಳಲ್ಲಿ ತುಂಡರಿಸಿರುವುದು ಆತಂಕಕಾರಿಯಾಗಿದ್ದು, ಸಂವಿಧಾನ ದತ್ತವಾದ ಧಾರ್ಮಿಕ ಹಕ್ಕನ್ನು ಮೊಟಕುಗೊಳಿಸುವ ಕೃತ್ಯವಾಗಿದೆ. ಹವ್ಯಕ ಮಹಾಸಭೆ ಈ ಘಟನೆಗಳನ್ನು ಖಂಡಿಸುತ್ತಾ ; ಇದಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಕುರಿತಾಗಿ ಸರ್ಕಾರದಿಂದ ಯಾವುದಾದರೂ ಸೂಚನೆಗಳಿದ್ದಲ್ಲಿ ಅದನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಮಹಾಸಭೆ ಆಗ್ರಹಿಸುತ್ತದೆ ಎಂದು ಡಾ. ಕಜೆ ಹೇಳಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top