ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ

Upayuktha
0



ಉಡುಪಿ: ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ, ವಿದ್ಯಾನಗರ, ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಪ್ರತಿಭಾನ್ವಿತರಾಗಿರುವ ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟುಗಳ ಆಯ್ಕೆ ಮಾಡಿ ಪ್ರವೇಶ ಕಲ್ಪಿಸುವ ಸಂಬಂಧ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಮೇ 5 ಮತ್ತು 6 ರಂದು ಬೆಂಗಳೂರು ವಿದ್ಯಾನಗರದ ಕ್ರೀಡಾಶಾಲೆಯಾದ ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟೀಯ ಯುವ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಕ್ರೀಡಾಪಟುಗಳು ಸೂಕ್ತ ದಾಖಲೆ ಗಳೊಂದಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ:0820-2521324, ಮೊ.ನಂ: 9845432303 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top