ಶೇಷಾದ್ರಿಪುರದ ರಾಯರ ಮಠ; ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸವ

Upayuktha
0



ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ  ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏ.15ರಂದು ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗೆ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಹಾಗೂ ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ.


ಸುಶೀಲೇಂದ್ರಾಚಾರ್ ಗೊಗ್ಗಿಯವರಿಂದ "ಶ್ರೀ ಸುಶಮೀಂದ್ರತೀರ್ಥರ ಜೀವನ ಮತ್ತು ಸಾಧನೆ" ವಿಷಯವಾಗಿ ಪ್ರವಚನ, ಶೇಷಾದ್ರಿಪುರದ  ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಮತ್ತು ಸುಧೀಂದ್ರನಗರದ ವಿಜಯವಿಠ್ಠಲ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ರಥೋತ್ಸವ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವಾ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀಮಠದ ವಿಚಾರಣಾಕರ್ತರಾದ  ಸುಬ್ಬು ನರಸಿಂಹ ಅವರು ತಿಳಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top