ದಾಸರ ಪದಗಳ ಗಾಯನ ಏಪ್ರಿಲ್ 10ರಂದು

Upayuktha
0



ಬೆಂಗಳೂರು
: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಏಪ್ರಿಲ್ 10, ಗುರುವಾರ ಸಂಜೆ 7-00ಕ್ಕೆ ದಾಸರ ಪದಗಳ ಗಾಯನ ನಡೆಯಲಿದೆ.

 ಶ್ರೀ ಜಿ.ಎಂ. ಕೌಶಿಲ್ ಇವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದ್ದು, ಕೀಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ಸರ್ವೋತ್ತಮ ಸಹಕರಿಸಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. 


ಈ ಗಾಯನ ಕಾರ್ಯಕ್ರಮವು  ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು ಇಲ್ಲಿ ನಡೆಯಲಿದೆ. ಆಸಕ್ತರು ಭಾಗವಹಿಸಬಹುದು. 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top