ಧರ್ಮಸ್ಥಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Upayuktha
0



ಧರ್ಮಸ್ಥಳ: ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ, ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.


ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ತೀರ್ಥಂಕರರಿಗೆ ವಿಶೇಷ ಅಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ, ಬಾಲ ತೀರ್ಥಂಕರನಿಗೆ ವೈಭವಯುತವಾದ ನಾಮಕರಣೋತ್ಸವವನ್ನು ಆಚರಿಸಲಾಯಿತು.


ಈ ಪವಿತ್ರ ಕಾರ್ಯಕ್ರಮದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು, ಡಿ. ಹರ್ಷೇಂದ್ರ ಕುಮಾರ್ ಅವರು ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಉಪಸ್ಥಿತರಿದ್ದು, ಭಕ್ತ ಸಮೂಹಕ್ಕೆ ಮಾರ್ಗದರ್ಶನ ನೀಡಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top