ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯ ಜ್ಞಾನ ಅಗತ್ಯ

Upayuktha
0

 



ಶಿವಮೊಗ್ಗ : ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸ ಟ್ರಸ್ಟ್, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಶಿವಮೊಗ್ಗ, ಕಾಲೇಜಿನ ಸಮಾಜ ಕಾರ್ಯ ವಿಭಾಗ, ಯುವ ರೆಡ್ ಕ್ರಾಸ್ ಘಟಕ ಹಾಗೂ ಐ ಕ್ಯೂ ಎ ಸಿ ವಿಭಾಗದ ಸಹಯೋಗದಲ್ಲಿ ಮಹಿಳೆಯರಿಗಾಗಿ; ಸಖಿ-  ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಒಂದು ದಿನದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.


ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಅದರಲ್ಲಿಯೂ ಋತು ಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ನಾವು ನಮ್ಮ ದೇಹವನ್ನು ಗೌರವಿಸಬೇಕು, ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ಏಕೆ ಸಂಭವಿಸುತ್ತಿವೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ತಿಳುವಳಿಕೆಯ ಕೊರತೆಯಿದ್ದರೆ ಕೆಲವು ಅಭ್ಯಾಸಗಳನ್ನು ಕುರುಡಾಗಿ ಅನುಸರಿಸುತ್ತೇವೆ, ಮತ್ತು ಆ ತಪ್ಪು ಕಲ್ಪನೆಗಳನ್ನು ನಂಬುತ್ತೇವೆ. ಯುವತಿಯರಿಗೆ ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಜ್ಞಾನವು ಅತ್ಯಂತ ಅವಶ್ಯಕವಾಗಿದೆ. ಇದು ಅವರ ಆರೋಗ್ಯವನ್ನು ಕಾಪಾಡಲು, ಆತ್ಮವಿಶ್ವಾಸ ಹೆಚ್ಚಿಸಲು ಮತ್ತು ಶಿಕ್ಷಣದಲ್ಲಿ ನಿರಂತರತೆ ಸಾಧಿಸಲು ಸಹಾಯ ಮಾಡುತ್ತದೆ. ಸರಿಯಾದ ಮಾಹಿತಿ ಮತ್ತು ಸಂಪನ್ಮೂಲಗಳ ಮೂಲಕ ಅವರು ತಮ್ಮ ದೇಹವನ್ನು ಗೌರವದಿಂದ ನಿರ್ವಹಿಸ ಬಹುದು. ಯುವ ಮನಸ್ಸುಗಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಪ್ರಸೂತಿ ತಜ್ಞರಾದ ಡಾ. ರಕ್ಷಾ ರಾವ್  ಉಷಾ ನರ್ಸಿಂಗ್ ಹೋಮ್ ಶಿವಮೊಗ್ಗ, ಇವರು ಸಂಪನ್ಮೂಲ ವ್ಯಕ್ತಿಗಳಾಗಿ  ಆಗಮಿಸಿ ಹೆಣ್ಣು ಮಕ್ಕಳ ಆರೋಗ್ಯದ ಪ್ರಾಮುಖ್ಯತೆ ಬಗ್ಗೆ ಮಾತನಾಡಿ, ಮುಟ್ಟಿನ ನೈರ್ಮಲ್ಯ, ಮುಟ್ಟಿನ ಚಕ್ರ ಮತ್ತು ಅದರ ಪ್ರಕ್ರಿಯೆ, ಮುಟ್ಟಿನ ಸಮಯದಲ್ಲಿ ಉಂಟಾಗುವ ಸಮಸ್ಯೆಗಳು, ಮುಟ್ಟಿನ ಕಿಟ್ ಬ್ಯಾಗ್ನಲ್ಲಿ ಇಡಬೇಕಾದ ಅಗತ್ಯ ವಸ್ತುಗಳು, ಆರೋಗ್ಯಕರವಾಗಿ ಮುಟ್ಟಿನ ಚಕ್ರವನ್ನು ನಿರ್ವಹಿಸುವ ವಿಧಾನಗಳು. PCOD ಸಮಸ್ಯೆ, ಗರ್ಭಕೋಶದ ಕ್ಯಾನ್ಸರ್, ದೇಹದ ಬೊಜ್ಜು ಮತ್ತು ಮಹಿಳೆಯರು ತಮ್ಮನ್ನು ತಾವು ಆರೋಗ್ಯವಾಗಿಡಲು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಇತ್ಯಾದಿಗಳನ್ನು ವಿವರಿಸಿದರು. 


ಇಂದಿನ ಹೆಚ್ಚಿನ ಸಮಸ್ಯೆಗಳ ಮೂಲ ಕಾರಣ ತಪ್ಪು ಜೀವನ ಶೈಲಿ ಹಾಗು ಒತ್ತಡ. ನಾವು ವ್ಯಾಯಾಮ, ಆಹಾರ ಇವುಗಳ ಕುರಿತು ಸರಿಯಾದ ಕ್ರಮ ಅನುಸರಿಸಲೇಬೇಕು. ದೈಹಿಕ ಶ್ರಮ ಅಥವಾ ವ್ಯಾಯಾಮ ಬಹಳ ಅಗತ್ಯ. ಹಾಗೆಯೇ ಪೌಷ್ಟಿಕ ಆಹಾರ ಸೇವನೆ, ಜಂಕ್ ಆಹಾರಗಳಿಂದ ಆದಷ್ಟು ದೂರವಿರುವುದು, ಸಾಕಷ್ಟು ನೀರು ಕುಡಿಯುವುದು ಹೆಣ್ಣುಮಕ್ಕಳ ಆರೋಗ್ಯಕ್ಕೆ ಅನುಸರಿಸಬೇಕಾದ ತತ್ವಗಳಿದ್ದಂತೆ. ಇದರೊಂದಿಗೆ ಧನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಆರ್ ಪಿ ಸಾತ್ವಿಕ್  ಮಾತನಾಡಿ,  ಮಹಿಳೆಯರ ಆರೋಗ್ಯದ ಮಹತ್ವವನ್ನು ವಿವರಿಸಿದರು.


ವಿಶೇಷ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲಾರಾದ ಡಾ. ಸಂಧ್ಯಾ ಕಾವೇರಿಯವರು,  ಸಂಸ್ಥೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮಹತ್ವದ ಬಗ್ಗೆ ಮಾತನಾಡಿದರು. ಈ ರೀತಿಯ ಕಾರ್ಯಕ್ರಮವು ನಮಗೆ ಜ್ಞಾನವನ್ನು ನೀಡುತ್ತದೆ ಮತ್ತು ಅನಾರೋಗ್ಯಕರ ಅಭ್ಯಾಸಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದರು.


ಸತೀಶ್ , ನಾನ್ಸಿ ಲವೀನಾ ಪಿಂಟೋ ಮತ್ತು ಇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಶ್ಮೀರದಲ್ಲಿ    ಭಯೋತ್ಪಾದಕ ದಾಳಿಗೆ ಬಲಿಯಾದ ಭಾರತೀಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕು. ಜ್ಯೋತಿ ಸ್ವಾಗತಿಸಿದರು. ಕು.ಪೂರ್ಣಿಮಾಶ್ರೀ ವಂದಿಸಿದರು. ಕು ಮಂಜುಳ ನಿರೂಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top