ಕೊಡಕಾಲ "ವೈದ್ಯನಾಥ ರಸ್ತೆ": ಶಾಸಕ ಕಾಮತ್‌ರಿಂದ ಅಧಿಕೃತ ನಾಮಫಲಕ ಅನಾವರಣ

Upayuktha
0


ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಳಪೆ ಉತ್ತರ 51 ನೇ ವಾರ್ಡಿನ ಕೊಡಕಾಲ ವೈದ್ಯನಾಥ ರಸ್ತೆಯ ಅಭಿವೃದ್ಧಿ ಸಹಿತ ರಸ್ತೆಗೆ "ಶ್ರೀ ವೈದ್ಯನಾಥ ರಸ್ತೆ" ಎಂಬ ಅಧಿಕೃತ ಹೆಸರಿನ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.


ನಂತರ ಮಾತನಾಡಿದ ಶಾಸಕರು, ನಗರದ ಅತ್ಯಂತ ಪುರಾತನ ದೈವಸ್ಥಾನಗಳಲ್ಲೊಂದಾದ ಕಣ್ಣೂರು ಅಳಪೆ ಪ್ರದೇಶದ ಕೊಡಕಾಲ ನ ವೈದ್ಯನಾಥ ದೈವಸ್ಥಾನಕ್ಕೆ ಹಾದು ಹೋಗುವ ರಸ್ತೆಯನ್ನು ಸ್ಥಳೀಯರ ಕೋರಿಕೆಯಂತೆ ಅಭಿವೃದ್ಧಿಪಡಿಸಿ ಉದ್ಘಾಟನೆಗೊಳಿಸುತ್ತಿರುವ ಈ ಸಂದರ್ಭದಲ್ಲಿ, ಇಲ್ಲಿನ ಮುಖ್ಯ ರಸ್ತೆಯನ್ನು "ಶ್ರೀ ವೈದ್ಯನಾಥ ರಸ್ತೆ" ಎಂದು ಅಧಿಕೃತವಾಗಿ ನಾಮಕರಣಗೊಳಿಸಲಾಗುತ್ತಿದೆ. ಈ ಬಗ್ಗೆ ಇಲ್ಲಿನ ನಿಕಟ ಪೂರ್ವ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿಯವರು ಪಾಲಿಕೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ ಆ ಹೆಸರೇ ಅಧಿಕೃತವಾಗುವಂತೆ ನೋಡಿಕೊಂಡಿದ್ದಾರೆ.  ಹಿಂದೆ ಇದನ್ನು ಅನಧಿಕೃತವಾಗಿ ಯೂಸುಫ್ ನಗರ ಎಂದು ಕರೆಯಲಾಗುತ್ತಿದ್ದ ಬಗ್ಗೆ ಅನೇಕರ ಗಮನಕ್ಕೆ ಬಂದಿತ್ತು. ಆದರೆ ಮಹಾನಗರ ಪಾಲಿಕೆಯ ದಾಖಲೆಗಳಲ್ಲಿ ಆ ಹೆಸರು ಅಧಿಕೃತವಾಗಿ ಇರಲೇ ಇಲ್ಲ. ಇನ್ನು ಮೇಲಾದರೂ ಇಂದಿನಿಂದ ಅಧಿಕೃತವಾಗಿರುವ ಹೆಸರನ್ನೇ ಸ್ಥಳೀಯರು ಹೆಚ್ಚಾಗಿ ಬಳಸಿ, ಎಲ್ಲೆಡೆ ಅದೇ ಹೆಸರು ನಮೂದಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಗೂಗಲ್ ಮ್ಯಾಪ್ ನಂತಹ ತಂತ್ರಜ್ಞಾನದ ಸಹಾಯವನ್ನೂ ಪಡೆಯಿರಿ ಎಂದು ಶಾಸಕರು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ವೈದ್ಯನಾಥ ದೈವಸ್ಥಾನದ ಗುತ್ತು ಮನೆತನದ ಪ್ರಮುಖರು, ಸ್ಥಳೀಯ ಬಿಜೆಪಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುರೇಶ್ ಆಚಾರ್ಯ, ನರೇಶ್ ಸರಿಪಲ್ಲ, ಕೊಡಕಾಲ ಹಿಂದೂ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಹಾಗೂ ಬಿಜೆಪಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top