ದಾವಣಗೆರೆ: ಏಪ್ರಿಲ್ 12 ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ

Chandrashekhara Kulamarva
0



ದಾವಣಗೆರೆ: ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ದವನದ ಹುಣ್ಣಿಮೆ ಅಂಗವಾಗಿ ದಿನಾಂಕ 12-04- 2025 ರಂದು ಶನಿವಾರ ಬೆಳಿಗ್ಗೆ 7-00ಕ್ಕೆ ನಡೆಯಲಿದೆ ಎಂದು ಶ್ರೀ ಗಾಯತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ.

ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಈ ಅಪ್ಪಟ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರು  ಪ್ರೇಮ್ ಜಿ. ಪಟೇಲ್ ಮತ್ತು ಕುಟುಂಬದವರು. 


ಕಳೆದ ಇಪ್ಪತ್ತೆಂಟು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top